News Kannada
Thursday, March 23 2023

ಕರ್ನಾಟಕ

ಮನೆಯಲ್ಲಿದ್ದ ನಾಲ್ಕು ಜಿಂಕೆ ಮಾಂಸ ವಶ: ದಂಪತಿ ಪರಾರಿ

Photo Credit :

ಮನೆಯಲ್ಲಿದ್ದ ನಾಲ್ಕು ಜಿಂಕೆ ಮಾಂಸ ವಶ: ದಂಪತಿ ಪರಾರಿ

ಚಾಮರಾಜನಗರ: ಮನೆಯಲ್ಲಿ ಜಿಂಕೆ ಮಾಂಸ ಸಂಗ್ರಹಿಟ್ಟಿರುವ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅರಣ್ಯಾಧಿಕಾರಿಗಳ ತಂಡ ನಾಲ್ಕು ಜಿಂಕೆ ಮಾಂಸವನ್ನು ವಶಪಡಿಸಿಕೊಂಡಿರುವ ಘಟನೆ ತಾಲೂಕಿನ ಕೋಳಿಪಾಳ್ಯದಲ್ಲಿ ನಡೆದಿದ್ದು, ಮಾಂಸ ಸಂಗ್ರಹಿಸಿಟ್ಟಿದ್ದ ದಂಪತಿ ಪರಾರಿಯಾಗಿದ್ದಾರೆ.

ಕೋಳಿಪಾಳ್ಯ ಗ್ರಾಮದ ನಾಗರಾಜ(60) ಎಂಬಾತ ತನ್ನ ಮನೆಯಲ್ಲಿ ಜಿಂಕೆ ಮಾಂಸವನ್ನು ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಮಾಹಿತಿ ಮೇರೆಗೆ ಬಿಆರ್‍ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವಲಯ ಅರಣ್ಯಾಧಿಕಾರಿ ಕಾಂತರಾಜು ನೇತೃತ್ವದಲ್ಲಿ ಸಿಬ್ಬಂದಿ ಮನೆ ಮೇಲೆ ದಾಳಿ ನಡೆಸಿತ್ತು. ಈ ವೇಳೆ ಮನೆಯಲ್ಲಿದ್ದ ದಂಪತಿ ಪರಾರಿಯಾಗಿದ್ದರು. ಆದರೆ ಮನೆಯನ್ನು ಶೋಧಿಸಿದಾಗ ಜಿಂಕೆ ಮಾಂಸ ದೊರೆತಿತ್ತು. ಅದನ್ನು ವಶಪಡಿಸಿಕೊಂಡು ಆರೋಪಿಗಳ ವಿರುದ್ಧ ವನ್ಯ ಜೀವಿ ಸಂರಕ್ಷಣೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ವಶಪಡಿಸಿಕೊಳ್ಳಲಾಗಿದೆ.

ಬಳಿಕ ನ್ಯಾಯಾಲಯದ ಆದೇಶದ ಮೇರೆಗೆ ಅರಣ್ಯ ಅಧಿಕಾರಿಗಳು ಜಿಂಕೆ ಮಾಂಸವನ್ನು ನಾಶಪಡಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗಿರುವ ದಂಪತಿಗಾಗಿ ಹುಡುಕಾಟ ನಡೆಸಲಾಗಿದೆ.

See also  ದೇಶಭಕ್ತಿಗೆ ಬೇರೆಯದೇ ಬಣ್ಣ: ವಿಹೆಚ್ಪಿ ವಿಷಾದ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು