News Kannada
Sunday, March 26 2023

ಕರ್ನಾಟಕ

ಬಳ್ಳಾರಿಯಲ್ಲಿ ಮತ್ತೋರ್ವ ಕೊರೊನಾ ಸೋಂಕಿತ ಗುಣಮುಖ: ಆಸ್ಪತ್ರೆಯಿಂದ ಬಿಡುಗಡೆ

Photo Credit :

ಬಳ್ಳಾರಿಯಲ್ಲಿ ಮತ್ತೋರ್ವ ಕೊರೊನಾ ಸೋಂಕಿತ ಗುಣಮುಖ: ಆಸ್ಪತ್ರೆಯಿಂದ ಬಿಡುಗಡೆ

ಬಳ್ಳಾರಿ: ಜಿಲ್ಲೆಯ ಕೊರೋನಾ ಸೊಂಕಿತ ಇನ್ನೋರ್ವ ಇಂದು ಗುಣಮುಖರಾಗಿದ್ದು ಇಂದು ಬಿಡುಗಡೆ ಮಾಡಲಾಯಿತು.

ಜಿಲ್ಲೆಯಲ್ಲಿ ಇದುವರೆಗೆ 13 ಜನ ಸೋಂಕಿತರಾಗಿದ್ದರು. ಅವರಲ್ಲಿ ಈ ಮೊದಲು ಗುಣಮುಖರಾದ ಪಿ-89,ಪಿ-91 ಮತ್ತು ಪಿ-141 ನಂತರ ಪಿ-90 & ಪಿ-151 ಅವರನ್ನು ಬಿಡುಗಡೆ ಮಾಡಲಾಗಿತ್ತು. ಮತ್ತೆ ಇನ್ನಿಬ್ಬರನ್ನು 21 ವರ್ಷ ವಯಸ್ಸಿನ ಪಿ-333 & 24 ವರ್ಷದ ಪಿ- 337 ಅವರನ್ನು ಗುಣಮುಖರಾದ ಹಿನ್ನೆಲೆ ಎರಡು ದಿನಗಳ ಹಿಂದೆ ಬಿಡುಗಡೆ ಮಾಡಲಾಗಿತ್ತು. ಇಂದು ಗುಣಮುಖರಾದ ಹೊಸಪೇಟೆಯ ಪಿ-336 ಅವರನ್ನು ಬಿಡುಗಡೆ ಮಾಡಲಾಯಿತು.

ಇವರು ಸಹ ಹೊಸಪೇಟೆ ನಗರಕ್ಕೆ ಸೇರಿದವರಾಗಿದ್ದು, ಈ ಮುಂಚೆ ಬಿಡುಗಡೆಯಾದ ಜಿಲ್ಲೆಯ ಮೊದಲ ಸೊಂಕಿತರ ಪ್ರಥಮ ಸಂಪರ್ಕಿತರಾಗಿದ್ದಾರೆ.

ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ ಅವರು ಗುಣಮುಖರಾಗಿ ಮನೆಯತ್ತ ತೆರಳಲು ಸಿದ್ದರಾಗಿ ನಿಂತಿದ್ದ ಪಿ-336 ಅವರಿಗೆ ಹೂಗುಚ್ಛ ನೀಡಿ, ಹಣ್ಣು-ಹಂಪಲು ನೀಡಿ ಚಪ್ಪಾಳೆ ತಟ್ಟಿ ಅಭಿನಂದಿಸಿದರು. ನಂತರ ಅವರಿಗೆ ಪಡಿತರ ಕಿಟ್ ಕಳುಹಿಸಿಕೊಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಎನ್.ಬಸರೆಡ್ಡಿ ಅವರು ಮಾತನಾಡಿ, ಇವರು ಬಂದಾಗ ಸಾಕಷ್ಟು ಭಯಭೀತರಾಗಿದ್ದರು, ಇವರಿಗೆ ಆಪ್ತ ಸಮಾಲೋಚನೆ ಮಾಡಿ ಅವರಲ್ಲಿದ್ದ ಭಯ ಹೋಗಲಾಡಿಸಿ,ಚಿಕಿತ್ಸೆ ನೀಡಿದೇವು, ಅವರು‌ ಇಂದು ಗುಣಮುಖರಾಗಿ ಹೊರಬಂದಿದ್ದಾರೆ ಎಂದರು.

ಇವರನ್ನು 14 ದಿನಗಳವರೆಗೆ ಹೋಮ್ ಕ್ವಾರಂಟೈನ್ ಮತ್ತು 14 ದಿನಗಳ ಕಾಲ ಸೆಲ್ಪ್ ರಿಪೋರ್ಟಿಂಗ್ ಮಾಡಲಾಗುವುದು ಹಾಗೂ ಜಿಲ್ಲಾ ಕಂಟ್ರೋಲ್ ರೂಂ ಮತ್ತು ನಮ್ಮ ರ್ಯಾಪಿಡ್ ರಿಸ್ಪಾನ್ಸ್ ತಂಡದಿಂದ 28 ದಿನಗಳ ಕಾಲ ನಿಗಾವಹಿಸಲಾಗುವುದು ಎಂದು ತಿಳಿಸಿದ ಅವರು, ಈ ಆರ್‍ಆರ್‍ಟಿ ತಂಡಗಳು ಗುಣಮುಖರಾಗಿರುವ ಈ ಜನರ ಮನೆಗಳ ಸುತ್ತಮುತ್ತಲಿನ ಮನೆಯವರಿಗೆ ಕೊರೊನಾ ಕುರಿತು ಜಾಗೃತಿ ಮೂಡಿಸಲಾಗುತ್ತದೆ ಎಂದರು.

ಗುಣಮುಖರಾಗಿ ಹೊರಬಂದ ಪಿ- 336 ಅವರು ತೀವ್ರ ಭಾವುಕರಾದರು. ನಂತರ ಮಾತನಾಡಿದ ಅವರು ಆಸ್ಪತ್ರೆಗೆ ದಾಖಲಾಗಿ‌ ಬಂದಾಗಿನಿಂದ ಇಲ್ಲಿಯವರೆಗೆ ಚೆನ್ನಾಗಿ ನೋಡಿಕೊಂಡರು. ಸಮರ್ಪಕ ಚಿಕಿತ್ಸೆ ಕೊಟ್ಟರು & ಸ್ಥೈರ್ಯ ಜನನ ಕಳೆದುಕೊಂಡಿದ್ದ ನಮ್ಮನ್ನು ಮಾನಸಿಕವಾಗಿಯೂ ಸಜ್ಜುಗೊಳಿಸಿದರು.

ಮತ್ತು ಗುಣಮಟ್ಟ ಆಹಾರ ಒದಗಿಸಿದರು. ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಯ ಋಣವನ್ನು‌ ನಾವೆಂದು ಮರೆಯುವುದಿಲ್ಲ ಎಂದರು.

ಈ ಸಂದರ್ಭದಲ್ಲಿ ಕೋವಿಡ್ ನೋಡಲ್ ಅಧಿಕಾರಿ ಡಾ.ಮಲ್ಲಿಕಾರ್ಜುನ, ಡಾ.ಅನಿಲ್,ಡಾ.ಲಿಂಗರಾಜು,ಡಾ.ವಿಜಯ ಶಂಕರ್, ಡಾ.ಸುನೀಲ್,ಡಾ.ವಿನಯ್,ಡಾ.ಸುಜಾತಾ,ಶುಶ್ರೂಷಾ ಅಧೀಕ್ಷಕಿ ಶಾಂತಾಬಾಯಿ,ಡಾ.ಚಿತ್ರಶೇಖರ್, ಡಾ.ಉಮಾ‌ಮಹೇಶ್ವರಿ‌ ಸೇರಿದಂತೆ ವೈದ್ಯಕೀಯ ಸಿಬ್ಬಂದಿ ಇದ್ದರು.

See also  ವಿಶ್ವ ತುಳು ಸಮ್ಮೇಳನ ನೇರ ಪ್ರಸಾರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

149

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು