ಕಾಸರಗೋಡು: ಸ್ಥಳೀಯಾಡಳಿತ ಸಂಸ್ಥೆ ಚುನಾವಣೆಯ ಮತಎಣಿಕೆ ಹಿನ್ನೆಲೆಯಲ್ಲಿ ಡಿ. 15 ರಾತ್ರಿ 12 ಗಂಟೆಯಿಂದ ಡಿ. 17 ರ ರಾತ್ರಿ 12 ಗಂಟೆ ತನಕ ಜಿಲ್ಲೆಯ ಸೂಕ್ಷ್ಮ ಸ್ಥಳಗಳಲ್ಲಿ 144 ರಂತೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.
ಅಹಿಕತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ದಂಗವಾಗಿ ನಿಷೇಧಾಜ್ಞೆ ಜಾರಿಗೊಳಿಸಿರುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಜನರು ಗುಂಪುಗೂಡುವುದು, ಮೆರವಣಿಗೆ ನಡೆಸುವುದು ಮೊದಲಾದವುಗಳನ್ನು ನಿಷೇಧಿಸಲಾಗಿದೆ. ಮಂಜೇಶ್ವರ ಪೊಲೀಸ್ ಠಾಣೆಯ ಉಪ್ಪಳ, ಮಂಜೇಶ್ವರ, ಹೊಸಂಗಡಿ, ಕುಂಜತ್ತೂರು, ಅದೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೋವಿಕ್ಕಾನ, ಇರಿಯಣ್ಣಿ, ಅಡೂರು, ಕುಂಬಳೆ ಠಾಣಾ ವ್ಯಾಪ್ತಿಯ ಬಂದ್ಯೋಡು, ಅಡ್ಕ, ಸೀತಾಂಗೋಳಿ, ಉಳುವಾರು, ಮೊಗ್ರಾಲ್, ಬಂಬ್ರಾಣ, ಕಾಸರಗೋಡು ನಗರಸಭಾ ವ್ಯಾಪ್ತಿ, ಕಾಸರಗೋಡು ಪೊಲೀಸ್ ಠಾಣಾ ವ್ಯಾಪ್ತಿ, ಮೇಲ್ಪರಂಬ, ವಿದ್ಯಾನಗರ ಕಾಞಂಗಾಡ್ ನಗರಸಭಾ, ಅಜನೂರು, ಪಂಚಾಯತ್, ಬೇಕಲ ಪೊಲೀಸ್ ಠಾಣಾ ವ್ಯಾಪ್ತಿ, ಪೆರಿಯ ಗ್ರಾಮ ಪಂಚಾಯತ್, ಚಂದೇರ ಪೊಲೀಸ್ ಠಾಣಾ ವ್ಯಾಪ್ತಿಯ ಪಡನ್ನ, ಪಿಲಿಕ್ಕೋಡ್ ಗ್ರಾಮ ಪಂಚಾಯತ್, ನೀಲೇಶ್ವರ ಪೊಲೀಸ್ ಠಾಣೆ, ನಗರಸಭಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.