ಕಾಸರಗೋಡು: ಡಿವೈಎಫ್ ಐ ಕಾರ್ಯಕರ್ತನೋರ್ವನನ್ನು ತಂಡವೊಂದು ಇರಿದು ಕೊಲೆಗೈದ ಘಟನೆ ನಿನ್ನೆ ರಾತ್ರಿ ಕಾಞಂಗಾಡ್ ನಲ್ಲಿ ನಡೆದಿದೆ.
ಕೊಲೆಗೀಡಾದವರನ್ನು ಅಬ್ದುಲ್ ರಹಮಾನ್(29) ಎಂದು ಗುರುತಿಸಲಾಗಿದೆ. ಕಲ್ಲೂರಾವಿ ನಿವಾಸಿಯಾಗಿದ್ದ ಇವರು ಬೈಕ್ ನಲ್ಲಿ ಸ್ನೇಹಿತನ ಜೊತೆ ಮನೆಗೆ ತೆರಳುತ್ತಿದ್ದಾಗ ಕಾಞಂಗಾಡ್ ತೆರಳುತ್ತಿದ್ದಾಗ ಕಲ್ಲೂರಾವಿ-ಹಳೆ ಕಡಪ್ಪುರ ರಸ್ತೆಯಲ್ಲಿ ತಂಡವೊಂದು ಈ ಕೃತ್ಯ ನಡೆಸಿದೆ.
ಬೈಕನ್ನು ತಡೆದ ತಂಡವು ಇರಿದು ಪರಾರಿಯಾಗಿದ್ದು, ಗಂಭೀರ ಗಾಯಗೊಂಡಿದ್ದ ಅಬ್ದುಲ್ ರಹಮಾನ್ ರನ್ನು ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ. ಜೊತೆಗಿದ್ದ ಶುಹೈಬ್ ಗೂ ಗಾಯಗೊಂಡಿದ್ದಾರೆ.
ಕೃತ್ಯದ ಸಂದರ್ಭದಲ್ಲಿ ಓರ್ವ ಆರೋಪಿಗೂ ಗಾಯವಾಗಿದ್ದು, ಇರ್ಷಾದ್(26) ಎಂಬಾತನನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೃತ್ಯದ ಹಿಂದೆ ಮುಸ್ಲಿಂ ಲೀಗ್ ಕಾರ್ಯಕರ್ತರ ಕೈವಾಡ ಎಂದು ಡಿವೈಎಫ್ಐ ಆರೋಪಿಸಿದೆ.
ಕೃತ್ಯ ಖಂಡಿಸಿ ಕಾಞಂಗಾಡ್ ನಗರಸಭಾ ವ್ಯಾಪ್ತಿಯಲ್ಲಿ ಇಂದು ಹರತಾಳಕ್ಕೆ ಡಿ ವೈ ಎಫ್ ಐ ಕರೆ ನೀಡಿದೆ. ರಾಜಕೀಯ ದ್ವೇಷ ಕೃತ್ಯಕ್ಕೆ ಕಾರಣ ಎಂದು ಶಂಕಿಸಲಾಗಿದೆ.
ಇತ್ತೀಚಿಗೆ ನಡೆದ ಸ್ಥಳೀಯಾಡಳಿತ ಸಂಸ್ಥೆ ಚುನಾವಣೆಯ ವಿಜಯೋತ್ಸವ ಸಂದರ್ಭದಲ್ಲಿ ಡಿ ವೈ ಎಫ್ ಐ ಮತ್ತು ಮುಸ್ಲಿಂ ಲೀಗ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿತ್ತು. ಇದಕ್ಕೆ ಪ್ರತಿಕಾರ ಎಂಬಂತೆ ಈ ಕೃತ್ಯ ನಡೆದಿರಬಹುದು ಎಂದು ಸಂಶಯಿಸಲಾಗಿದೆ.
ಕೃತ್ಯದಲ್ಲಿ ಆರು ಮಂದಿ ಶಾಮೀಲಾಗಿದ್ದರು ಎಂಬ ಪ್ರಾಥಮಿಕ ಮಾಹಿತಿ ಪೊಲೀಸರಿಗೆ ಲಭಿಸಿದೆ.
ಮೂರು ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ . ಕಾ ಞ0 ಗಾಡ್ ಡಿ ವೈ ಎಸ್ ಪಿ ವಿನೋದ್ ನೇತೃತ್ವದ ಲ್ಲಿ ತನಿಖೆ ಆರಂಭಿಸಿದೆ. ಸ್ಥಳದಲ್ಲಿ ಮುನ್ನೆಚ್ಚರಿಕಾ ಕ್ರಮ ಗಳನ್ನು ತೆಗೆದುಕೊಂಡಿದೆ .