ಚಾಮರಾಜನಗರ: ರಾಜ್ಯ ಸರ್ಕಾರವು ಇಂದಿನಿಂದ ರಾಜ್ಯಾದ್ಯಂತ ರಾತ್ರಿ ಕರ್ಫ್ಯೂ ವಿಧಿಸಿರುವ ಹಿನ್ನೆಲೆಯಲ್ಲಿ ಶ್ರೀ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ ಕೆಲವು ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಇದನ್ನು ಕಡ್ಡಾಯವಾಗಿ ಪಾಲಿಸಲು ಭಕ್ತರಿಗೆ ಮನವಿ ಮಾಡಲಾಗಿದೆ.
- ಕೊಠಡಿಗಳನ್ನ ಆನ್ಲೈನ್ ನಲ್ಲಿ ಕಾಯ್ದಿರಿಸಿರುವ ಭಕ್ತಾದಿಗಳು ರಾತ್ರಿ 10.30 ರೊಳಗೆ ಮಹದೇಶ್ವರ ಬೆಟ್ಟಕ್ಕೆ ಬಂದು ಮಾಹಿತಿ ಕೇಂದ್ರದಲ್ಲಿ ನೋಂದಾಯಿಸಿ ಸಂಬಂಧಪಟ್ಟ ವಸತಿ ಗೃಹದೊಳಗೆ ವಾಸ್ತವ್ಯಕ್ಕೆ 10.45ರೊಳಗೆ ತಲುಪತಕ್ಕದ್ದು.
- ರಾತ್ರಿ 11ರಿಂದ ಬೆಳಗ್ಗೆ 5ರವರೆಗೆ ಮಾಹಿತಿ ಕೇಂದ್ರವನ್ನು ಮುಚ್ಚಲಾಗುವುದು ಹಾಗೂ ಯಾವುದೇ ಕೊಠಡಿಗಳನ್ನು ಈ ಸಮಯದಲ್ಲಿ ವಿತರಿಸಲಾಗುವುದಿಲ್ಲ.
- ರಾತ್ರಿ 11 ರಿಂದ ಬೆಳಗ್ಗೆ 5ರವರೆಗೆ ಸಂಪೂರ್ಣ ಲಾಕ್ಔಟ್ ಪಾಲಿಸಲಾಗುವುದು. ಯಾವುದೇ ಸಂಚಾರಕ್ಕೆ ಅವಕಾಶವಿರುವುದಿಲ್ಲ.
- ದೇವಸ್ಥಾನ, ಲಾಡು ಕೌಂಟರ್ ಹಾಗೂ ದಾಸೋಹಕ್ಕೆ ಬರುವವರು ರಾತ್ರಿ 10ರ ಒಳಗಾಗಿ ದರ್ಶನ ಪಡೆಯುವುದು, ದಾಸೋಹ ಸ್ವೀಕರಿಸುವುದು ಹಾಗೂ ಲಾಡು ಖರೀದಿಸುವುದು. ರಾತ್ರಿ 10ರ ನಂತರ ಈ ಮೂರೂ ಸೇವೆಗಳು ಲಭ್ಯವಿರುವುದಿಲ್ಲ.
- ಕೊಠಡಿ ಕಾಯ್ದಿರಿಸಿರುವವರು ನಂತರ ಬಂದಲ್ಲಿ ರೀಫಂಡ್ ನೀಡಲಾಗುವುದಿಲ್ಲ. ಈ ಬಗ್ಗೆ ಪತ್ರ ವ್ಯವಹಾರಕ್ಕೆ ಅವಕಾಶವಿರುವುದಿಲ್ಲ.
- ಬೆಳಗ್ಗೆ 4ಕ್ಕೆ ಪ್ರಾರಂಭವಾಗುವ ಅಭಿಷೇಕಕ್ಕೆ ಭಕ್ತಾದಿಗಳಿಗೆ ಪ್ರವೇಶವಿರುವುದಿಲ್ಲ. ಆದರೆ ಸಾಂಪ್ರದಾಯಿಕವಾಗಿ ಅಭಿಷೇಕವನ್ನು ಬೇಡ ಗಂಪಣರು ಹಾಗೂ ದೇವಾಲಯದ ಒಳಾವರಣದ ಸಿಬ್ಬಂದಿ ನಡೆಸಲಿರುವರು. ಬೆಳಗ್ಗೆ 5ರ ನಂತರ ದರ್ಶನಕ್ಕೆ ಅನುವು ಮಾಡಿಕೊಡಲಾಗುವುದು.
- ದೇವಾಲಯದ ಆವರಣದಲ್ಲಿ ವಸತಿ ಗೃಹಗಳು, ಕಾಟೇಜುಗಳು ಹಾಗೂ ಡಾರ್ಮಿಟರಿ ಹೊರತುಪಡಿಸಿ, ಬೇರೆ ಯಾವುದೇ ತೆರೆದ ಜಾಗಗಳು ಹಾಗೂ ದೇವಾಲಯದ ಪಕ್ಕದಲ್ಲಿರುವ ಭಕ್ತಾದಿಗಳಿಗೆ ನೆರಳಿನ ವ್ಯವಸ್ಥೆಯ ಷೆಡ್ನಲ್ಲಿ ಉಳಿದುಕೊಳ್ಳಬಾರದಾಗಿ ಮನವಿ.
- ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿಯೇ ಶ್ರೀ ಕ್ಷೇತ್ರಕ್ಕೆ ಬರುವುದು ಹಾಗೂ ಶ್ರೀ ಕ್ಷೇತ್ರದಿಂದ ತೆರಳುವವರೆಗೆ ಧರಿಸಿರಲು ಕೋರಿದೆ. ವೈಯುಕ್ತಿಕವಾಗಿ ಸ್ಯಾನಿಟೈಸರ್ ಇಟ್ಟುಕೊಳ್ಳಲು ಹಾಗೂ ಆಗ್ಗಾಗ್ಗೆ ಉಪಯೋಗಿಸಲು ಕೋರಿದೆ.
- ಸಾಮಾಜಿಕ ಅಂತರ ಕಡ್ಡಾಯವಾಗಿ ಪಾಲಿಸುವುದು. ವಿಶೇಷವಾಗಿ ದೇವಸ್ಥಾನದ ಕ್ಯೂ ಲೈನಿನಲ್ಲಿ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಂಡೇ ದರ್ಶನ ಮಾಡುವುದು.
- ದಾಸೋಹದಲ್ಲಿ ಕಡ್ಡಾಯವಾಗಿ ಕ್ಯೂ ಲೈನಿನಲ್ಲಿ ಹಾಗೂ ಕುಳಿತುಕೊಳ್ಳುವ ಮೇಜಿನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು.
- ಯಾವುದೇ ಸಂದೇಹವಿದ್ದಲ್ಲಿ ಮಾಹಿತಿ ಕೇಂದ್ರದಲ್ಲಿ ನಿರ್ವಹಣೆಯಲ್ಲಿರುವ ಸಹಾಯವಾಣಿ ನಂಬರಿಗೆ 1860 425 4350 ಗೆ ಕರೆ ಮಾಡುವುದು.