ಹಾಸನ: ಪಟ್ಲ ಬೆಟ್ಟದ ಕಾಡಂಚಿನಲ್ಲಿ ಹೆಣ್ಣಾನೆಯೊಂದು ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಘಟನೆ ಸಕಲೇಶಪುರ ತಾಲ್ಲೂಕಿನ ಬಿಸಿಲೆ ಮೀಸಲು ಅರಣ್ಯದಲ್ಲಿ ಬೆಳಕಿಗೆ ಬಂದಿದೆ.
ಮೀಸಲು ಅರಣ್ಯದ ಆನೆಗುಂಡಿ ಬಳಿ ಹೆಣ್ಣಾನೆ ಶವ ಪತ್ತೆಯಾಗಿದೆ. ಸ್ಥಳಕ್ಕೆ ಡಿಸಿಎಫ್ ಬಸವರಾಜ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಆನೆಯ ಮೃತದೇಹದ ಮೇಲೆ ಗಾಯದ ಗುರುತು ಪತ್ತೆಯಾದ ಹಿನ್ನೆಲೆಯಲ್ಲಿ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿರುವ ಅರಣ್ಯ ಇಲಾಖೆ ತನಿಖೆ ಮುಂದುವರಿಸಿದೆ.