News Kannada
Saturday, April 01 2023

ಕರ್ನಾಟಕ

ಪಂಚಮಸಾಲಿ ಸಮಾಜಕ್ಕೆ 2ಏ ಮೀಸಲಾತಿ ನೀಡದಿದ್ದರೆ ಧರಣಿ ; ಜಯ ಮೃತ್ಯುಂಜಯ ಸ್ವಾಮಿ

Photo Credit :

ಮೈಸೂರು: ರಾಜ್ಯ ಸರ್ಕಾರವು ಪಂಚಮಸಾಲಿ ಸಮಾಜಕ್ಕೆ ಮುಂದಿನ ಸೆ.30ರ ಒಳಗೆ 2ಎ ಮೀಸಲಾತಿ ಘೋಷಿಸಬೇಕು. ಇಲ್ಲದಿದ್ದರೆ ಅ.1ರಿಂದ ಬೆಂಗಳೂರಿನಲ್ಲಿ ಧರಣಿ ಸತ್ಯಾಗ್ರಹ ಆರಂಭಿಸಲಾಗುವುದು ಎಂದು ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.

ಸೂಕ್ತ ಸಮಯಕ್ಕೆ ಸೂಕ್ತ ಮುಖ್ಯಮಂತ್ರಿ ಬಂದಿದ್ದಾರೆ ಎಂದು ಹರ್ಷವ್ಯಕ್ತಪಡಿಸಿದ ಅವರು, ಈ ಹಿಂದೆ ಧರಣಿ ವೇಳೆ ಬಸವರಾಜ ಬೊಮ್ಮಾಯಿ ಗೃಹಸಚಿವರಾಗಿದ್ದರು. ಈಗ ಅವರೇ ಮುಖ್ಯಮಂತ್ರಿಯಾಗಿದ್ದಾರೆ. ಶಿಗ್ಗಾಂವಿಯಲ್ಲಿ ಬೊಮ್ಮಾಯಿ 3 ಬಾರಿ ಗೆಲ್ಲಲು ನಮ್ಮ ಸಮಾಜ ಕಾರಣ. ಪಂಚಮಸಾಲಿ ಸಮುದಾಯಕ್ಕೆ ಸೇರಿದವರಿಗೆ ಮುಖ್ಯಮಂತ್ರಿ ಸ್ಥಾನ ಸಿಗದ ಕಾರಣ ಬೇಸರವಿದೆ. ಈ ಬೇಸರ ನಿವಾರಣೆ ಆಗಬೇಕಾದರೆ ಮೀಸಲಾತಿ ನೀಡಬೇಕು ಎಂದು ಸಲಹೆ ಮಾಡಿದರು. ಪಂಚಮಸಾಲಿ ಹಾಗೂ ಗೌಡ ಲಿಂಗಾಯತರಿಗೆ 2ಎ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಬೃಹತ್ ಸಮಾವೇಶ ನಡೆಸಿ ನಮ್ಮ ಹಕ್ಕೊತ್ತಾಯ ಮಂಡಿಸಿದ್ದೆವು. ಈ ಬಗ್ಗೆ ಅಧಿವೇಶನದಲ್ಲಿ ಮಾತು ನೀಡಿದ್ದ ಸರ್ಕಾರವು, ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಬೇಡಿಕೆ ಈಡೇರಿಸುವ ಭರವಸೆ ನೀಡಿತ್ತು. ಆದರೆ ಬದಲಾದ ಕಾಲಘಟ್ಟದಲ್ಲಿ ಮುಖ್ಯಮಂತ್ರಿ ಬದಲಾಗಿದ್ದಾರೆ. ನಮ್ಮ ಹಿಂದೆ ನಡೆಸಿದ ಸಮಾವೇಶಕ್ಕೆ ಸಹಕರಿಸಿದ್ದ ಬಸವರಾಜ ಬೊಮ್ಮಾಯಿಯವರು ಈಗ ಸಿಎಂ ಆಗಿದ್ದಾರೆ. ಹಾಗಾಗಿ ಸರ್ಕಾರಕ್ಕೆ ನಮ್ಮ ಹಕ್ಕೊತ್ತಾಯಗಳನ್ನು ಮತ್ತೆ ನೆನಪಿಸುವ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದರು.

See also  ಪ್ರಾಕೃತಿಕ ವಿಕೋಪ ಪರಿಹಾರ ವಿತರಣೆ ವಿಫಲ : ಈಶ್ವರ ಖಂಡ್ರೆ ಆರೋಪ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

145

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು