News Kannada
Sunday, March 26 2023

ಕರ್ನಾಟಕ

ಪ್ರಾಥಮಿಕ ಶಾಲೆ ಆರಂಭ ಸಂಜೆ ಸಭೆಯಲ್ಲಿ ನಿರ್ಧಾರ: ಸಿಎಂ

Photo Credit :

ಬೆಂಗಳೂರು, ;ತಜ್ಞರ ಅಭಿಪ್ರಾಯ ಆಧರಿಸಿ ಪ್ರಾಥಮಿಕ ಶಾಲೆಗಳನ್ನು ಆರಂಭಿಸುವ ಹಾಗೂ ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡುವ ಬಗ್ಗೆ ಸಂಜೆ ನಡೆಯುವ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಹೇಳಿದರು.
ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ೩ನೇ ಅಲೆಯ ಬಗ್ಗೆ ತಜ್ಞರು ಮಾತನಾಡಿದ್ದಾರೆ. ಹಾಗೆಯೇ ಮೊದಲು ಮತ್ತು ಎರಡನೇ ಅಲೆಯನ್ನು ವಿಶ್ಲೇಷಿಸಿ ವರದಿಯನ್ನು ನೀಡಿದ್ದಾರೆ. ಈ ಎಲ್ಲವನ್ನು ಗಮನದಲ್ಲಿಟ್ಟುಕೊಂಡು ಪ್ರಾಥಮಿಕ ಶಾಲಾ ಆರಂಭ, ಸಾರ್ವಜನಿಕ ಗಣೇಶೋತ್ಸವ ಎಲ್ಲದರ ಬಗ್ಗೆಯೂ ಸಂಜೆ ನಡೆಯುವ ಕೋವಿಡ್ ಸಂಬಂಧಿತ ಸಭೆಯಲ್ಲಿ ತೀರ್ಮಾನ ಮಾಡುತ್ತೇವೆ ಎಂದರು.
ಧಾರ್ಮಿಕ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡೆ ತೀರ್ಮಾನ ಮಾಡಲಾಗುವುದು. ಯಾವುದೇ ತೀರ್ಮಾನಕ್ಕೂ ತಜ್ಞರ ಅಭಿಪ್ರಾಯಗಳೇ ಆಧಾರ. ತಜ್ಞರ ಸಲಹೆಯಂತೆ ಸರ್ಕಾರ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.
ಇದಕ್ಕೂ ಮೊದಲು ಮುಖ್ಯಮಂತ್ರಿಗಳು ವಿಧಾನಸೌಧದಲ್ಲಿ ಪರಿಶಿಷ್ಟ ಜಾತಿ, ಪಂಗಡಗಳ ದೌರ್ಜನ್ಯ ಪ್ರತಿಬಂಧ ಅಧಿನಿಯಮದಡಿ ರಾಜ್ಯ ಮಟ್ಟದ ಜಾಗೃತಾ ಮತ್ತು ಉಸ್ತುವಾರಿ ಸಮಿತಿಯ ಸಭೆ ನಡೆಸಿ ಪರಿಶಿಷ್ಟ ಜಾತಿ, ಪಂಗಡಗಳ ದೌರ್ಜನ್ಯ ಕಾಯ್ದೆಯಡಿ ದಾಖಲಾಗಿರುವ ಪ್ರಕರಣಗಳು ಅವುಗಳ ಪ್ರಗತಿಗಳ ಪರಿಶೀಲನೆ ನಡೆಸಿದರು.ಈ ಸಭೆಯಲ್ಲಿ ಸಚಿವರುಗಳಾದ ಕೋಟಾ ಶ್ರೀನಿವಾಸಪೂಜಾರಿ, ಬಿ. ಶ್ರೀರಾಮುಲು, ಜೆ.ಸಿ. ಮಾಧುಸ್ವಾಮಿ, ಸಮಿತಿಯ ಸದಸ್ಯರುಗಳಾದ ಶಾಸಕರು, ಸಂಸದರು ಪಾಲ್ಗೊಂಡಿದ್ದರು.

See also  ಚಾಮುಂಡಿ ಬೆಟ್ಟದಲ್ಲಿ ಪ್ರಾಚೀನ ಕೊಳಗಳ ಶೋಧ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು