News Kannada
Friday, March 24 2023

ಕರ್ನಾಟಕ

ರಾಜ್ಯದ ಜನರಲ್ಲಿ ಕೊರೋನಾ ಜೊತೆ ಮತ್ತೊಂದು ಆತಂಕ

coivd 19
Photo Credit :

ಬೆಂಗಳೂರು ; ರಾಜ್ಯದಲ್ಲಿ ಕೋವಿಡ್‍ನಿಂದ ಚೇತರಿಸಿಕೊಂಡ 104 ಜನರಲ್ಲಿ ಕ್ಷಯರೋಗ ಪತ್ತೆಯಾಗಿದೆ. ಆರೋಗ್ಯ ಇಲಾಖೆ ಆಗಸ್ಟ್ 16ರಿಂದ ಆಗಸ್ಟ್ 29ರ ಅವಯಲ್ಲಿ ಕೋವಿಡ್‍ನಿಂದ ಚೇತರಿಸಿಕೊಂಡ ವ್ಯಕ್ತಿಗಳ ಮತ್ತು ಸಂಪರ್ಕದಲ್ಲಿರುವವರ ಮನೆಗಳಿಗೆ ತೆರಳಿ ಕ್ಷಯ ರೋಗ ಪತ್ತೆ ಮಾಡುವ ಅಭಿಯಾನ ಹಮ್ಮಿಕೊಂಡಿತ್ತು.ಆರೋಗ್ಯ ಇಲಾಖೆ ಸಿಬ್ಬಂದಿಯಿಂದ ನಡೆಸಲಾದ ಈ ಅಭಿಯಾನದಲ್ಲಿ ಕೋವಿಡ್‍ನಿಂದ ಚೇತರಿಸಿಕೊಂಡ 5,37,333 ಜನರನ್ನು ಕ್ಷಯ ರೋಗ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದರಲ್ಲಿ 104 ಜನರಲ್ಲಿ ಕ್ಷಯರೋಗ ಪತ್ತೆಯಾಗಿದೆ.
ಇದೇ ವೇಳೆ ಕೋವಿಡ್‍ನಿಂದ ಚೇತರಿಸಿಕೊಂಡ ವ್ಯಕ್ತಿಗಳ ಸಂಪರ್ಕ ಹೊಂದಿದ್ದ 51 ಜನರಲ್ಲಿ ಕ್ಷಯ ರೋಗ ಕಂಡು ಬಂದಿದೆ. ರೋಗ ತಪಾಸಣೆಗಾಗಿ 17,74,240 ಕೋವಿಡ್‍ನಿಂದ ಚೇತರಿಸಿಕೊಂಡ ವ್ಯಕ್ತಿಗಳ ಮನೆಯ ಸಂಪರ್ಕಿತರನ್ನು ಪರೀಕ್ಷೆಗೆ ಒಳಪಡಿಲಾಗಿತ್ತು ಎಂದು ಇಲಾಖೆ ತಿಳಿಸಿದೆ. ಕ್ಷಯ ರೋಗ ಪತ್ತೆ ಅಭಿಯಾನದಲ್ಲಿ ಒಟ್ಟು 24,598 ಜನರಲ್ಲಿ ಕ್ಷಯ ರೋಗ ಇರುವ ಬಗ್ಗೆ ಆರೋಗ್ಯ ಇಲಾಖೆ ಶಂಕೆ ವ್ಯಕ್ತಪಡಿಸಿತ್ತು. ಆದರೆ ಕೋವಿಡ್‍ನಿಂದ ಚೇತರಿಸಿಕೊಂಡ ವ್ಯಕ್ತಿಗಳಲ್ಲಿ 104 ಮಂದಿಗೆ ಕ್ಷಯ ರೋಗ ಬಂದಿರುವುದು ಪತ್ತೆಯಾಗಿದೆ. ಕ್ಷಯ ರೋಗವು ಕೋವಿಡ್ ಸೋಂಕಿತರಲ್ಲಿ ಹೆಚ್ಚಿನ ಅಪಾಯ ಉಂಟು ಮಾಡುವುದರಿಂದ, ಸರ್ಕಾರ ಕೋವಿಡ್‍ನಿಂದ ಚೇತರಿಸಿಕೊಂಡವರ ಕ್ಷಯ ರೋಗ ಪತ್ತೆ ಅಭಿಯಾನ ಹಮ್ಮಿಕೊಂಡಿದೆ.

See also  ಕೋವಿಡ್‌ ವಿರುದ್ದ ಹೋರಾಟದಲ್ಲಿ ಒಂದೇ ದಿನ ಮೃತರಾದ ದಂಪತಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು