News Kannada
Sunday, June 04 2023
ಬೆಂಗಳೂರು ನಗರ

ಬೆಂಗಳೂರು: ಲಂಚ ಹಗರಣ, ಬಿಜೆಪಿ ಶಾಸಕ ಮಾಡಾಳ್‌ ಸೆರೆ

mla madal arrested
Photo Credit :

ಬೆಂಗಳೂರು: ಲಂಚ ಪ್ರಕರಣದ ಪ್ರಮುಖ ಆರೋಪಿಯಾಗಿರುವ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಸೋಮವಾರ ಸಂಜೆ ಬಂಧಿಸಿದ್ದಾರೆ. ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿತ್ತು. ಅರ್ಜಿ ವಜಾಗೊಂಡ ವೇಳೆ ಚನ್ನಗಿರಿಯಲ್ಲಿ ಸರ್ಕಾರಿ ಕಾರ್ಯಕ್ರಮ‌ದಲ್ಲಿ ಭಾಗಿಯಾಗಿದ್ದ ಅವರು, ಕ್ಷಣಮಾತ್ರದಲ್ಲಿ ಅಲ್ಲಿಂದ ತೆರಳಿ ನಾಪತ್ತೆಯಾಗಿದ್ದರು.

ಬಂಧಿಸುವುದಕ್ಕಾಗಿ ಲೋಕಾಯುಕ್ತ ಪೊಲೀಸರ ತಂಡ ಅವರ ನಿವಾಸಕ್ಕೆ ತೆರಳಿತ್ತು. ಆದರೆ, ಅಷ್ಟರಲ್ಲೇ ಅವರು ಬೆಂಗಳೂರಿಗೆ ಕಾರಿನಲ್ಲಿ ತೆರಳಿದ್ದಾರೆ ಎನ್ನಲಾಗಿತ್ತು. ಇದೀಗ ಕೊನೆಗೂ ಅವರನ್ನು ಬಂಧಿಸುವಲ್ಲಿ ಲೋಕಾಯುಕ್ತ ಪೊಲೀಸರು ಯಶಸ್ವಿಯಾಗಿದ್ದಾರೆ. ಚನ್ನಗಿರಿಯಿಂದ ಬೆಂಗಳೂರಿಗೆ ಬರುತ್ತಿದ್ದಾಗ ಅವರನ್ನು ಬಂಧಿಸಲಾಗಿದೆ.

See also  ಮಾತಿನ ಜಗಳ ಕೊಲೆಯಲ್ಲಿ ಅಂತ್ಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು