News Kannada
Tuesday, March 28 2023

ಬೆಳಗಾವಿ

ಕಾಲೇಜಿನ ಕಾಂಪೌಂಡ್‌ ಗೇಟ್‌ ಬಿದ್ದು ಬಾಲಕನ ಸಾವು

Photo Credit :

 

ಬೆಳಗಾವಿ : ಕಾಲೇಜು ಕಾಂಪೌಂಡ್‌ ಗೆ ಅಳವಡಿಸಿದ್ದ ಗೇಟ್ ಶಿಥಿಲಗೊಂಡು ಬಿದ್ದು ಬಾಲಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕೋಡಿ ಪಟ್ಟಣದಲ್ಲಿ ನಡೆದಿದೆ.
ನಗರದ ಆರ್.ಡಿ.ಕಾಲೇಜಿನ ಗೇಟ್ ಬಳಿ ಇಂದು ನಡೆದುಕೊಂಡು ಹೋಗುತಿದ್ದಾಗ ಮಳೆಗೆ ಶಿಥಿಲಗೊಂಡಿದ್ದ ಕಾಂಪೌಂಡ್‌ ನ ಗೇಟ್‌ ಬಿದ್ದಿದೆ. ಗೇಟ್‌ ಬಿದ್ದು ಅದರ ಅಡಿಯಲ್ಲಿ ಸಿಲುಕಿಕೊಂಡ 10 ವರ್ಷದ ಬಾಲಕ ಸೂಫಿಯಾನ್ ರಾಜು ಮುಲ್ಲಾ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಗೇಟ್ ದಾಟಿ ಮನೆಗೆ ಹೊರಟಿದ್ದ ಸಂದರ್ಭದಲ್ಲಿ ಗೇಟ್ ಬಿದ್ದಿದ್ದು ಸರಿಯಾಗಿ ಜೋಡಣೆ ಮಾಡದ ಕಾರಣ ಮಳೆಯಲ್ಲಿ ಬಿದ್ದಿದೆ.
ನಗರದ ಇಂದಿರಾನಗರ ನಿವಾಸಿ ಸೂಫಿಯಾನ್ ಸಾವನ್ನಪ್ಪಿದ್ದು, ಘಟನೆಯಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಕಾಲೇಜು ಆಡಳಿತ ಮಂಡಳಿ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ನಗರದ ಕಾಲೇಜಿನ ವಿದ್ಯಾರ್ಥಿಗಳ ಎರಡು ತಂಡಗಳ ನಡುವೆ ಹೊಡೆದಾಟ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

145

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು