News Karnataka Kannada
Friday, March 29 2024
Cricket
ಬಾಗಲಕೋಟೆ

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಆಗ್ರಹಿಸಿ ಏ.13 ರಿಂದ ಜನಾಂದೋಲನ

Inauguration of administrative office of Federation of Bunts Associations at Mulki on April 5
Photo Credit :

ಬಾಗಲಕೋಟೆ:  ಬೀಳಗಿಯ ಉತ್ತರ ಕರ್ನಾಟಕ ಸ್ವಾಭಿಮಾನ ವೇದಿಕೆಯಿಂದ ಕೃಷ್ಣಾ, ಮಹಾದಾಯಿ, ನವಲಿ ಸಂಕಲ್ಪ ಯಾತ್ರೆಯನ್ನು ಹಾಗೂ ಉತ್ತರ ಕರ್ನಾಟಕ ಸಮಗ್ರ ಅಭಿವೃದ್ಧಿಗೆ, ಅಸಮಾನತೆ ಹೋಗಲಾಡಿಸಲು ಏ.13 ರಿಂದ 17 ರವರೆಗೆ ಟ್ರ್ಯಾಕ್ಟರ್ ಗಳ ಮೂಲಕ ಮೂಲಕ ಜನಾಂದೋಲನ ನಡೆಯಲಿದೆ ಎಂದು ಉತ್ತರ ಕರ್ನಾಟಕ ಸ್ವಾಭಿಮಾನ ವೇದಿಕೆ ಯ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಪ್ರತಿಪಕ್ಷದ ಮಾಜಿ ನಾಯಕ ಎಸ್.ಆರ್.ಪಾಟೀಲ ತಿಳಿಸಿದರು.

ನವನಗರದ ಪತ್ರಿಕಾಭವನದಲ್ಲಿ ಭಾನುವಾರ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ‌ ಅವರು, ನರಗುಂದದಿಂದ ಏ.13 ರಂದು ಆರಂಭಗೊಳ್ಳುವ ಟ್ರ್ಯಾಕ್ಟರ್‌ ಜಾಥಾ 108 ಗ್ರಾಮಗಳಲ್ಲಿ ಜನಾಂದೋಲನ ಹೋರಾಟ ನಡೆಯಲಿದೆ ಎಂದರು.

ಸಮಾರೋಪ ಏಪ್ರಿಲ್ 17 ರಂದು ಬೀಳಗಿ ತಾಲೂಕಿನ ಬಾಡಗಂಡಿಯ ಬಾಪೂಜಿ ಅಂತರಾಷ್ಟ್ರೀಯ ಶಾಲೆಯ ಆವರಣದಲ್ಲಿ ನಡೆಯಲಿದೆ ಎಂದು ತಿಳಿಸಿದರು.

ಈ‌ಹೋರಾಟ ಯಾವುದೇ ವ್ಯಕ್ತಿ, ಪಕ್ಷದ ವಿರುದ್ಧ ಅಲ್ಲ, ಇದೊಂದು ಉತ್ತರ ಕರ್ನಾಟಕ ಹಕ್ಕಿಗಾಗಿ, ಉತ್ತರ ಕರ್ನಾಟಕ ನೀರಾವರಿ ಯೋಜನೆ‌ ಶೀಘ್ರ ಅಭಿವೃದ್ಧಿ ಮಾಡಲು ಹೋರಾಟ ನಡೆಯಲಿದೆ ಎಂದು ತಿಳಿಸಿದರು.

ಉತ್ತರ ಕರ್ನಾಟಕ ನೀರಾವರಿ ಯೋಜನೆಯನ್ನು ಸರ್ಕಾರ ಶೀಘ್ರ ಪೂರ್ಣಗೊಳಿಸಬೇಕು. ವಿಳಂಭ ಮಾಡಬಾರದು ಎಂದು ಈ ಹೋರಾಟ ಆಯೋಜಿಸಲಾಗಿದೆ ಎಂದು ಹೇಳಿದರು. ಮಾಜಿ ಸಚಿವ ಅಜಯಕುಮಾರ ಸರನಾಯಕ ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು