News Kannada
Friday, March 24 2023

ಬೆಳಗಾವಿ

ವಿಶ್ವವಿದ್ಯಾಲಯಗಳು ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಬೇಕು: ಸಿಎಂ ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Photo Credit :

ಬೆಳಗಾವಿ : ವಿಶ್ವವಿದ್ಯಾಲಯಗಳು ವಿದ್ಯಾರ್ಜನೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸಬೇಕು, ಜಗತ್ತಿನ ಶಕ್ತಿಯು ಜ್ಞಾನದ ಕಡೆಗೆ ವಾಲುತ್ತಿದೆ. ವಿಶ್ವವಿದ್ಯಾಲಯಗಳು ಇದನ್ನು ಅರಿತುಕೊಂಡು ಶಿಕ್ಷಣ ಗುಣಮಟ್ಟವನ್ನು ಸುಧಾರಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದರು.

ಹಿರೇಬಾಗೇವಾಡಿಯ ಮಲ್ಲಪ್ಪನ ಗುಡ್ಡದ ಹೊಸ ನಿವೇಶನದಲ್ಲಿ 126 ಎಕರೆ ಪ್ರದೇಶದಲ್ಲಿ ನಿರ್ಮಿಸಲಾಗುತ್ತಿರುವ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕಟ್ಟಡಗಳ ನಿರ್ಮಾಣಕ್ಕೆ ಬುಧವಾರ ಭೂಮಿಪೂಜೆ ಹಾಗೂ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಎರಡನೇ ಹಂತದ ಕಟ್ಟಡ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ವಿವಿಯನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆಸುವ ಬದ್ಧತೆ ಸಿಪಾಯಿಯಿಂದ ಹಿಡಿದು ಕುಲಪತಿಗಳವರೆಗೆ ಎಲ್ಲರಿಗೂ ಇರಬೇಕು. ವಿವಿಗಳು ವಿಭಿನ್ನವಾಗಿ ಕಾರ್ಯನಿರ್ವಹಿಸುವ ಮೂಲಕ ಪ್ರಸ್ತುತ ಸನ್ನಿವೇಶಕ್ಕೆ ತಕ್ಕಂತೆ ಎಲ್ಲ ಕ್ಷೇತ್ರದಲ್ಲಿ ಸಾಧನೆಗೈಯಬೇಕು ಎಂದರು.

ಹೊಸ ಪ್ರಯೋಗಗಳು ವಿಶ್ವವಿದ್ಯಾಲಯದಲ್ಲಿ ಆಗಬೇಕು. ಊಹೆಗೂ ನಿಲುಕದಂತಹ ತಾಂತ್ರಿಕ ಮತ್ತು ವೈಜ್ಞಾನಿಕ ಬದಲಾವಣೆಗಳಾಗುತ್ತಿವೆ. ಇದಕ್ಕೆ ಅನುಗುಣವಾಗಿ ವಿಶ್ವವಿದ್ಯಾಲಯ ಬದಲಾಗುವ ಮೂಲಕ ಆವಿಷ್ಕಾರದ ಕೇಂದ್ರವಾಗಬೇಕು. ಶಿಕ್ಷಣ ಕ್ಷೇತ್ರದ ಆಮೂಲಾಗ್ರ ಬದಲಾವಣೆ ತರಬೇಕಾದರೆ ಅದು ವಿಶ್ವವಿದ್ಯಾಲಯದ ಮೂಲಕ ಮಾತ್ರ ಸಾಧ್ಯವಿದೆ. ಈ ಹೊಣೆಗಾರಿಕೆಯನ್ನು ಅರಿತುಕೊಂಡು ವಿಶ್ವವಿದ್ಯಾಲಯದಲ್ಲಿ ಆವಿಷ್ಕಾರಗಳನ್ನು ಕೈಗೊಳ್ಳಬೇಕು ಎಂದರು. ಕಳೆದ ಹತ್ತು ವರ್ಷಗಳಲ್ಲಿ ಆಗಿರುವ ಪಿ.ಎಚ್‌ಡಿ ಗಳ ವಿಶ್ಲೇಷಣೆ ಆಗಬೇಕು. ಅವುಗಳಿಂದ ಆಗುವ ಪ್ರಯೋಜನಗಳ ಬಗ್ಗೆ ಕೂಡ ಅಧ್ಯಯನ ನಡೆಸಬೇಕು, ವಿವಿಯ ಪ್ರತಿ ಕೊಠಡಿಯು ಡಿಜಿಟಲೀಕರಣ ಆಗಬೇಕು. ತಾರ್ಕಿಕ ಚಿಂತನೆಯನ್ನು ಬೆಳೆಸಿಕೊಂಡು ಪ್ರಶ್ನೆಗಳನ್ನು ಕೇಳುವ ಧೈರ್ಯವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸಬೇಕು, ಎಂದು ವಿಶ್ವವಿದ್ಯಾಲಯದ ಕುಲಪತಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ ನೀಡಿದರು.

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ವಿವಿ ಸ್ಥಾಪನೆಯಿಂದ ಕುಡಿಯುವ ನೀರಿನ ಯೋಜನೆಗೆ ಸ್ವಲ್ಪಮಟ್ಟಿಗೆ ತೊಂದರೆಯಾಗಿದೆ. ಆದ್ದರಿಂದ ಕುಡಿಯುವ ನೀರು ಯೋಜನೆ ಅನುಷ್ಠಾನಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.

ಉನ್ನತ ಶಿಕ್ಷಣ ಇಲಾಖೆಯ ಸಚಿವ ಡಾ.ಅಶ್ವತ್ಥನಾರಾಯಣ ಸಿ.ಎನ್., ಮಾತನಾಡಿ ಈ ಭಾಗದ ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ಸೌಲಭ್ಯ ಒದಗಿಸುವ ಉದ್ಧೇಶದಿಂದ ವಿಶ್ವವಿದ್ಯಾಲಯಕ್ಕೆ ಭೂಮಿ ಒದಗಿಸಲಾಗಿದೆ, ಸದ್ಯಕ್ಕೆ ಎಂಟು ಸಾವಿರ ಪೈಕಿ ಈಗಾಗಲೇ ಎರಡು ಸಾವಿರ ಸ್ಮಾರ್ಟ್ ಕ್ಲಾಸ್ ಆರಂಭಿಸಲಾಗಿದೆ. ಉಳಿದ ಆರು ಸಾವಿರ ಕ್ಲಾಸ್ ಗಳನ್ನು ಸ್ಮಾರ್ಟ್ ಕ್ಲಾಸ್ ಗಳನ್ನಾಗಿ ಪರಿವರ್ತಿಸುವ ಕೆಲಸ ಮಾಡಲಾಗುವುದು. ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಿಗೆ ಸಬಲೀಕರಣ, ಸ್ವಾಯತ್ತತೆಯನ್ನು ಒದಗಿಸುವ ಮೂಲಕ ಪ್ರಸ್ತುತ ಸನ್ನಿವೇಶಕ್ಕೆ ತಕ್ಕಂತೆ ಉತ್ಕೃಷ್ಟ ಮತ್ತು ಜಾಗತಿಕ ಗುಣಮಟ್ಟದ ಶಿಕ್ಷಣವನ್ನು ಒದಗಿಸಲಾಗುವುದು ಎಂದು ಹೇಳಿದರು.

ಸೂಪರ್ ಥರ್ಟಿ ಯೋಜನೆ ಮೂಲಕ ಮುಂದಿನ ಒಂದು‌ ವರ್ಷದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಶಿಕ್ಷಣ ಗುಣಮಟ್ಟ ಸುಧಾರಣೆಗೆ ಸರಕಾರ ಕ್ರಮ ಕೈಗೊಳ್ಳಲಿದೆ ಎಂದು ಭರವಸೆಯನ್ನು ನೀಡಿದರು. ಸಮಗ್ರ, ಸದೃಢ ಕರ್ನಾಟಕ ಕಟ್ಟಲು ಶಿಕ್ಷಣವೇ ಬುನಾದಿಯಾಗಿದೆ. ಆದ್ದರಿಂದ ಶಿಕ್ಷಣ ಮತ್ತು ಎಲ್ಲರಿಗೂ ಉದ್ಯೋಗ ನೀಡುವ ಪ್ರಯತ್ನವನ್ನು ಉನ್ನತ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಇಲಾಖೆ ಮಾಡುತ್ತಿದೆ ಎಂದರು.

See also  ಬೆಳಗಾವಿ:ಹಾಸ್ಟೆಲ್ ನಲ್ಲಿ ಊಟ ಸೇವಿಸಿದ 14 ವಿದ್ಯಾರ್ಥಿನಿಯರು ಅಸ್ವಸ್ಥ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು