ಹೆಬ್ಬಳ್ಳಿ ಗ್ರಾಮದಲ್ಲಿ 20 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸುತ್ತಿರುವ ಹೆಬ್ಬಳ್ಳಿ-ಮೊರಬ-ಬ್ಯಾಹಟ್ಟಿ ರಸ್ತೆ ಹಾಗೂ ಜಲ ಜೀವನ್ ಮಿಷನ್ ಯೋಜನೆಯಡಿ 4 ಕೋಟಿ ರೂ.ವೆಚ್ಚದಲ್ಲಿ ಮನೆ ಮನೆಗೆ ನಳ ಸಂಪರ್ಕ ಕಲ್ಪಿಸುವ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಭಾರತ ಸರ್ಕಾರ,ರಾಜ್ಯ ಸರ್ಕಾರಗಳು ಹಾಗೂ ಹೊರ ಅನುದಾನ,ನೆರವಿನಿಂದ ಜಲ ಜೀವನ ಮಿಷನ್ ಅಡಿ ಮನೆ ಮನೆಗೆ ನಳ ಸಂಪರ್ಕ ಕಲ್ಪಿಸಲಾಗುತ್ತಿದೆ.ಜಲಧಾರೆ ಯೋಜನೆಯಡಿ ಮಲಪ್ರಭಾ ನದಿಮೂಲದ ನೀರನ್ನು ಜಿಲ್ಲೆಯ ಪ್ರತಿ ಗ್ರಾಮಗಳಿಗೂ ಪೂರೈಸಲು ಸುಮಾರು 1100 ಕೋಟಿ ರೂ.ವೆಚ್ಚದ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ ಎಂದರು.
ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ,ಧಾರವಾಡ ಶಾಸಕ ಅಮೃತ ದೇಸಾಯಿ , ಹೆಬ್ಬಳ್ಳಿ ಗ್ರಾ.ಪಂ.ಅಧ್ಯಕ್ಷೆ ತೇಜಸ್ವಿನಿ ತಲವಾಯಿ,ಉಪಾಧ್ಯಕ್ಷ ವಿಠ್ಠಲ ಇಂಗಳೆ ,ಜಿಪಂ ಗ್ರಾಮೀಣ ಕುಡಿಯುವ ನೀರು ಸರಬರಾಜು ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ರಾಜಶೇಖರ ಮುನವಳ್ಳಿ,ಪಂಚಾಯತ ರಾಜ್ ಇಂಜಿನಿಯರಿಂಗ್ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಬಿ.ಎಸ್.ಗೌಡರ್ ಮತ್ತಿತರರು ಇದ್ದರು.