ಹುಬ್ಬಳ್ಳಿ: ಧಾರವಾಡದಿಂದ ಬೆಂಗಳೂರಿಗೆ ‘ವಂದೇ ಭಾರತ್ ರೈಲು ಪ್ರಾರಂಭಿಸಲು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಕೇಂದ್ರದ ರೈಲ್ವೆ ಸಚಿವ ಅಶ್ವಿನ್ ವೈಶ್ಣವ್ ಅವರಿಗೆ ಮನವಿ ಮಾಡಿದರು.
ದೆಹಲಿಯ ಗೃಹ ಕಚೇರಿಯಲ್ಲಿ ವಿವಿಧ ರೈಲ್ವೆ ಯೋಜನೆಗಳನ್ನು ಚರ್ಚಿಸುವ ವೇಳೆ ಈ ವಿಷಯ ಪ್ರಸ್ತಾಪಿಸಿದರು. ಸಕಾರಾತ್ಮಕವಾಗಿ ಸ್ಪಂದಿಸಿದ ರೈಲ್ವೆ ಸಚಿವ ಅಶ್ವಿನ್ ಅವರು ಸದ್ಯದಲ್ಲೇ ಈ ರೈಲು ಆರಂಭಿಸಲು ಸೂಕ್ತ ಕ್ರಮ ಕೈಗೊಳ್ಳಲಾಗು ವುದೆಂದು ಹೇಳಿದ್ದಾರೆ.
ಧಾರವಾಡದಿಂದ ಬೆಂಗಳೂರಿಗೆ ರೈಲಿನಲ್ಲಿ ಸಾಕಷ್ಟು ಜನರು ಪ್ರಯಾಣಿಸುವುದರಿಂದ ಮತ್ತು ಅನೇಕ ಕಾಲೇಜುಗಳು ಇರುವುದರಿಂದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.