ದಾವಣಗೆರೆ : ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹರಿಹರದಲ್ಲಿನ ತುಂಗಾನದಿಯ ತಟ , ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ಪಂಚಮಸಾಲಿ ಜಗದ್ಗುರು ಪೀಠ , ಹರಕ್ಷೇತ್ರ ಹರಿಹರ ಇವರ ವತಿಯಿಂದ ಆಯೋಜಿಸಿರುವ ತುಂಗಭದ್ರಾ ಆರತಿ ಪ್ರಯುಕ್ತ 108 ಯೋಗ ಮಂಟಪಗಳಿಗೆ ಶಿಲಾನ್ಯಾಸ ನೆರವೇರಿಸಿದ್ದಾರೆ.
108 ಯೋಗ ಮಂಟಪಗಳಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ಇನ್ನು ತುಂಗಾಭದ್ರಾ ನದಿ ದಂಡೆಯಲ್ಲಿ ವಾಯು ವಿಹಾರಕ್ಕೆ ವ್ಯವಸ್ಥೆ ಮಾಡಲಾಗುವುದು. 108 ಮಂಟಪಗಳು ನಿರ್ಮಾಣವಾಗಲಿವೆ. ಹರಿಹರ ಪುಣ್ಯ ಕ್ಷೇತ್ರವಾಗಲಿದ್ದು, ದೇಶದ ಗಮನ ಸೆಳೆಯಲಿದೆ ಎಂದು ಹೇಳಿದ್ದಾರೆ.
ಶೀಘ್ರದಲ್ಲೇ ಗಂಗಾ ಆರತಿ ರೀತಿ ತುಂಗಾ ಆರತಿ ಮಾಡಲಾಗುವುದು. ಈಗಾಗಲೇ ಕಾಮಗಾರಿಗೆ ಶಂಕು ಸ್ಥಾಪನೆ ಮಾಡಲಾಗಿದೆ. ಆದಷ್ಟು ಬೇಗ ಕಾಮಗಾರಿ ಪೂರ್ಣ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.