News Karnataka Kannada
Friday, April 19 2024
Cricket
ಹುಬ್ಬಳ್ಳಿ-ಧಾರವಾಡ

ಹೋಟೆಲ್ ಮಾಲೀಕನ ಕೊಲೆ ಯತ್ನ ಪ್ರಕರಣ: ಆರೋಪಿಗಳಿಗೆ 5 ವರ್ಷ ಕಾರಾಗೃಹ ಶಿಕ್ಷೆ

ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಲು ತನ್ನ ಪ್ರೇಮಿಗೆ ಅವಕಾಶ ಕೊಟ್ಟ ಮಹಿಳೆಗೆ ಕೇರಳ ಕೋರ್ಟ್ 40 ವರ್ಷಮತ್ತು 6 ತಿಂಗಳ ಕಠಿಣ ಜೈಲು ಶಿಕ್ಷೆ ಹಾಗೂ 20,000 ರೂ. ದಂಡ ವಿಧಿಸಿ ಆದೇಶಿಸಿದೆ.
Photo Credit : IANS

ಹುಬ್ಬಳ್ಳಿ : ಕರಾವಳಿ ಫಿಷ್ ಲ್ಯಾಂಡ್ ಹೋಟೆಲ್ ಮಾಲೀಕನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಲು ಯತ್ನಿಸಿದ್ದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳಿಗೆ ಇಲ್ಲಿನ 5 ನೇ ಅಪರ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ 5 ವರ್ಷ ಕಾರಾಗೃಹ ಶಿಕ್ಷೆ ಹಾಗೂ 52 ಸಾವಿರ ದಂಡ ವಿಧಿಸಿದೆ.ಅಶ್ವಾಕ ಸುತಾರ , ಮಹ್ಮದ್ ಆರೀಫ್ ಐನಾಪುರಿ ಶಿಕ್ಷೆಗೆ ಒಳಗಾದವರು, ಗಿರಿಯಾಲ ರೋಡ್ ಪಕ್ಕಕ್ಕೆ ಇರುವ ಕಾಮರೆಡ್ಡಿ ಕಾಂಪ್ಲೆಕ್ಸ್‌ನಲ್ಲಿದ್ದ ಕರಾವಳಿ ಫಿಷ್ ಲ್ಯಾಂಡ್ ಹೋಟೆಲ್ ಮಾಲೀಕ ಉದಯ ಮರಕಲ್ ಗಾಯಗೊಂಡಿದ್ದರು.

ಘಟನೆ ಹಿನ್ನೆಲೆ : 2018 ಫೆ . 31 ರಂದು ಹೋಟೆಲ್‌ನಲ್ಲಿ ವ್ಯಾಪಾರ ಮಾಡುತ್ತಿದ್ದಾಗ ರಾತ್ರಿ 10 ರ ಸುಮಾರಿಗೆ ಬಂದ ಆರೋಪಿತರು ಸರಾಯಿ ಬಾಟಲಿಗೆ ನೀರು ಮಿಕ್ ಮಾಡಲು ಹೋಟೆಲ್‌ನಲ್ಲಿದ್ದ ನೀರಿನ ಜಗ್ಗು ತೆಗೆದುಕೊಂಡು ಹೋಗಿದ್ದಾರೆ.

ಈ ವೇಳೆ ಉದಯ ಅವರು ಜಗ್ಗನ್ನು ಹೊರಗಡೆ ತೆಗೆದುಕೊಂಡು ಹೋದರೆ ಊಟ ಮಾಡುವವರಿಗೆ ತೊಂದರೆಯಾಗುತ್ತದೆ ಎಂದು ಹೇಳಿದಕ್ಕೆ ಆರೋಪಿತರು ಅವಾಚ್ಯವಾಗಿ ಬೈದಿದ್ದಾರೆ . ನಂತರ ಇದನ್ನು ಪ್ರಶ್ನಿಸಿದಾಗ ಇಬ್ಬರು ಸೇರಿ ಬಟನ್ ಚಾಕುವಿನಿಂದ ಬೆನ್ನು ಮತ್ತು ಬಲಗಡೆ ಪಕ್ಕಡಿಗೆ ಇರಿದು ಕೊಲೆ ಮಾಡಲು ಯತ್ನಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ 5 ನೇ ಅಪರ ಮತ್ತು ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ಕೆ.ಎನ್ . ಗಂಗಾಧರ ಶಿಕ್ಷೆ ವಿಧಿಸಿದ್ದಾರೆ . ಸರಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಸುಮಿತ್ರಾ ಎಂ. ಅಂಚಟಗೇರಿ ವಾದ ಮಂಡಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು