ಧಾರವಾಡ: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಗೆಲುವು ದಾಖಲಿಸುತ್ತೇನೆ ಎಂಬ ವಿಶ್ವಾಸವಿತ್ತು. ಆದರೆ, ಇಷ್ಟೊಂದು ದೊಡ್ಡ ಪ್ರಮಾಣದ ಮತಗಳ ಅಂತರದಿಂದ ಗೆಲುವು ಸಾಧಿಸುತ್ತೇನೆ ಎಂದುಕೊಂಡಿರಲಿಲ್ಲ ಎಂದು ಕುಂದಗೋಳ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ದಾಖಲಿಸಿದ ಬಿಜೆಪಿ ಅಭ್ಯರ್ಥಿ ಎಂ.ಆರ್.ಪಾಟೀಲ ಹೇಳಿದರು.
ಗೆಲುವಿನ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ಅವರು, ಈ ಗೆಲುವಿಗೆ 20 ವರ್ಷಗಳ ಶ್ರಮವಿದೆ. ಕಾಂಗ್ರೆಸ್ನಿಂದ ಯಾವುದೇ ಕೆಲಸಗಳಾಗಿಲ್ಲ ಎಂಬ ಆರೋಪವಿತ್ತು. ಈಗ ಬಿಜೆಪಿಗೆ ಬಲ ನೀಡಿದ್ದಾರೆ. ನಮ್ಮ ಪಕ್ಷದ ಕಾರ್ಯಕರ್ತರು ಹಾಗೂ ಹಿರಿಯರ ಶ್ರಮದಿಂದ ಗೆಲುವು ದಾಖಲಿಸಿದ್ದೇನೆ. ಮತದಾರರ ಋಣ ತೀರಿಸುತ್ತೇನೆ ಎಂದರು.