News Kannada
Saturday, March 25 2023

ಹುಬ್ಬಳ್ಳಿ-ಧಾರವಾಡ

ಮುಸ್ಲಿಂ ವ್ಯಾಪಾರಿ ಅಂಗಡಿ ಧ್ವಂಸ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

Photo Credit : IANS

ಧಾರವಾಡ : ಜಿಲ್ಲೆಯ ನುಗ್ಗಿಕೇರಿಯ ಹನುಮ ದೇವಾಲಯದ ಆವರಣದಲ್ಲಿ ಮುಸ್ಲಿಂ ವ್ಯಾಪಾರಿಗೆ ಸೇರಿದ ಕಲ್ಲಂಗಡಿ ಅಂಗಡಿ ಧ್ವಂಸಗೊಳಿಸಿದ ಆರೋಪದ ಮೇರೆಗೆ ನಾಲ್ವರನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಮುಸ್ಲಿಂ ವ್ಯಾಪಾರಿ ನಬಿಸಾಬ್ ಕಿಲ್ಲೆದಾರ್ ಸಲ್ಲಿಸಿದ ದೂರಿನ ಆಧಾರದ ಮೇಲೆ ವಿಡಿಯೋ ದೃಶ್ಯಾವಳಿ ಪರಿಶೀಲಿಸಿದ ಧಾರವಾಡ ಗ್ರಾಮಾಂತರ ಪೊಲೀಸರು ಆರೋಪಿಗಳಾದ ಮೈಲಾರಪ್ಪ ಗುಡ್ಡಪ್ಪನವರ್ (27) ಮಹಾಲಿಂಗ್ ಹೈಗಳಿ (26) ಚಿದಾನಂದ ಕಲಾಲ್ ಮತ್ತು ಕುಮಾರ್ ಕಟ್ಟಿಮನಿ (26) ಎಂಬುವರನ್ನು ಭಾನುವಾರ ರಾತ್ರಿ ಪೊಲೀಸರು ಬಂಧಿಸಿದ್ದಾರೆ.ಇವರೆಲ್ಲರೂ ಧಾರವಾಡದ ನಿವಾಸಿಗಳಾಗಿದ್ದಾರೆ.

10 ಮಂದಿ ಆರೋಪಿಗಳ ವಿರುದ್ಧ ಎಫ್ ಐಆರ್ ಸಲ್ಲಿಸಲಾಗಿದೆ. ಘಟನೆ ಬಗ್ಗೆ ಇಂಟರ್ ನೆಟ್ ನಲ್ಲಿ ದೊರೆತ ವಿಡಿಯೋ ದೃಶ್ಯಾವಳಿ ಮೂಲಕ ಕೆಲವು ಜನರಿಗೆ ಸಮನ್ಸ್ ನೀಡಿದ್ದೇವೆ. ವಿಚಾರಣೆಗಾಗಿ ನಾಲ್ವರನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಮಧ್ಯೆ ಸೌಹಾರ್ದತೆ ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ. ದೇಶದಲ್ಲಿ ನಾವೆಲ್ಲರೂ ಒಟ್ಟಾಗಿ ಬದುಕಬೇಕಾಗಿದೆ. ಕಾನೂನನ್ನು ಕೈಗೆ ತೆಗೆದುಕೊಳ್ಳುವ ಹಕ್ಕಿಲ್ಲ, ಇಂತಹ ಕೃತ್ಯಗಳಲ್ಲಿ ತೊಡಗುವವರನ್ನು ಸರ್ಕಾರ ರಕ್ಷಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

See also  ಚಿಕನ್ ಪೀಸ್ ಗಾಗಿ ಇಬ್ಬರ ಮಧ್ಯೆ ಜಗಳ: ಓರ್ವ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು