News Kannada
Saturday, April 01 2023

ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ: ವಿಪಕ್ಷದ ಮೇಲೆ ಇನ್ನೂ ಎರಡು ತಿಂಗಳು ಐಟಿ ದಾಳಿ ಸಮಾನ್ಯ – ಎಚ್.ಡಿ.ಕೆ

HD Deve Gowda vs DK Shivakumar Kumaraswamy's attack
Photo Credit : News Kannada

ಹುಬ್ಬಳ್ಳಿ: ವಿರೋಧ ಪಕ್ಷದ ನಾಯಕರ ಮೇಲೆ ಇನ್ನೂ ಎರಡು ತಿಂಗಳು ಐಟಿ ದಾಳಿ ಸಾಮಾನ್ಯ.‌ ಇದು ಯಾಕೆ ಅಂತಲೂ ಎಲ್ಲರಿಗೂ ಗೊತ್ತು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದರು.

ಹುಬ್ಬಳ್ಳಿ ತಾಲೂಕಿನ ಹೆಬಸೂರನಲ್ಲಿ ಗ್ರಾಮದಲ್ಲಿ ಜೆಡಿಎಸ್ ಮುಖಂಡ ಪ್ರಭಾಕರ್ ರೆಡ್ಡಿ ಮನೆ ಮೇಲೆ ಐಟಿ ದಾಳಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಪ್ರಭಾಕರ್ ರೆಡ್ಡಿ ಒಬ್ಬ ಉದ್ಯಮಿ. ಇಂತಹ ಐಟಿ ದಾಳಿ ಸಾಮಾನ್ಯ ಅದು ಯಾಕೆ ಅಂತ ಗೊತ್ತು. ಇನ್ನೂ ಎರಡು ಮೂರು ತಿಂಗಳು ಇಂತಹ ಐಟಿ ದಾಳಿಗಳು ವಿರೋಧ ಪಕ್ಷದ ಮೇಲೆ ನಡೆಯುತ್ತವೆ. ಇದು ಯಾಕೆ ಅಂತ ಎಲ್ಲರಿಗೂ ಗೊತ್ತು ಈ ಬಗ್ಗೆ ಜಾಸ್ತಿ ಮಾತನಾಡುವ ಅವಶ್ಯಕತೆಯಿಲ್ಲ ಎಂದರು.

ಕಾಂಗ್ರೆಸ್ ಮತ್ತು ಬಿಜೆಪಿ ಭ್ರಷ್ಟಾಚಾರದ ಬಗ್ಗೆ ವಿಧಾನ ಸಭಾ ಕಲಾಪದಲ್ಲಿ ಚರ್ಚೆ ತೌಡು ಕುಟ್ಟುವ ಕೆಲಸವಾಗುತ್ತಿದೆ. ಚರ್ಚೆ ಯಿಂದ ಏನು ಸಾಧ್ಯಯಿಲ್ಲ. ಎಲ್ಲಾ ಭ್ರಷ್ಟಾಚಾರ ಆರೋಪಗಳಿಗೆ ದಾಖಲೆ ಒದಗಿಸಲು ಸಾಧ್ಯವಿಲ್ಲ.ಕಾಂಗ್ರೆಸ್ ಭ್ರಷ್ಟಾಚಾರ ಆರೋಪ ಭೂತದ ಬಾಯಿಯಲ್ಲಿ ಭಗವದ್ಗೀತೆ ಕೇಳಿದಂತೆ. ಬಿಜೆಪಿಯವರು ಅವರ ಆತ್ಮ ಸಾಕ್ಷಿ ಗೆ ಉತ್ತರ ಕೊಡಬೇಕು.

ಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಸಾಮಾನ್ಯ. ಇದಕ್ಕೆ ದಾಖಲೆ ನೀಡಲ್ಲ. ನಾನು ಈ ಹಿಂದೆ ಭ್ರಷ್ಟಾಚಾರದ ಆರೋಪಗಳಿಗೆ ದಾಖಲೆ ನೀಡಿದ್ದೆ . ಆದರೆ ಆ ದಾಖಲೆಗಳಿಂದಕಾಂಗ್ರೆಸ್ ಅನುಕೂಲ ಮಾಡಿಕೊಂಡಿತು. ಕಾಂಗ್ರೆಸ್ ನಂಬಿದ್ರೆ ಅಕ್ಕಿನೂ ಸಿಗಲ್ಲ ಹಕ್ಕಿನೂ ಸಿಗಲ್ಲ. ಜನಾರ್ದನ ರೆಡ್ಡಿಯವರ ಪ್ರಾದೇಶಿಕ ಪಕ್ಷ ಕಾಂಗ್ರೆಸ್ ಮತ್ತು ಬಿಜೆಪಿಗೆ ಹೊಡೆತ ನೀಡಬಹುದು ಆದರೆ ಕೆಪಿಪಿಯಿಂದ ಜೆಡಿಎಸ್ ಗೆ ಏನು ಆಗಲ್ಲ ಎಂದರು.

See also  ಎಸ್.ಡಿ.ಎಂ ಕಾಲೇಜು- ವೈಜ್ಞಾನಿಕ ಕೈ ತೊಳೆಯುವ ಅಭಿಯಾನ ಉದ್ಘಾಟನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು