News Kannada
Thursday, March 23 2023

ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ: ಜಲ್ ಜೀವನ್ ಮಿಷನ್ ಯಶಸ್ಸು ಕುರಿತು ಟ್ವೀಟ್‌ ಮೂಲಕ ಪ್ರಧಾನಿ ಸಂತಸ

Pm Modi expresses happiness over Jal Jeevan Mission's scheme, twitter
Photo Credit : News Kannada

ಹುಬ್ಬಳ್ಳಿ: ಜಲ್ ಜೀವನ್ ಮಿಷನ್ ಯೋಜನೆಯ ಅಭಿಯಾನದ ಅಂಗವಾಗಿ ಕಲಘಟಗಿ ತಾಲೂಕಿನ ನೀರಸಾಗರ ಗ್ರಾಮಸ್ಥರ ಜೀವನದಲ್ಲಿ ಆಗಿರುವ ಗುಣಾತ್ಮಕ ಬದಲಾವಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್‌  ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ.

ಧಾರವಾಡ ಲೋಕಸಭಾ ಕ್ಷೇತ್ರದ ಸಂಸದ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಧಾರವಾಡ ಜಿಲ್ಲೆಯಲ್ಲಿ ಜಲ್ ಜೀವನ್ ಮಿಷನ್ ಯೋಜನೆ ಅಭಿಯಾನದ ಯಶಸ್ಸನ್ನು ಉಲ್ಲೆಖಿಸಿ, ನೀರಸಾಗರ ಗ್ರಾಮಸ್ಥರ ಜೀವನದಲ್ಲಿ ಕಂಡುಬಂದಿರುವ ಗುಣಾತ್ಮಕ ಬದಲಾವಣೆ ಕುರಿತು ಹಂಚಿಕೊಂಡಿದ್ದ ಅಭಿಪ್ರಾಯಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರೀಟ್ವಿಟ್ ಮಾಡಿ, ತಮ್ಮ ಸಂತಸ ಹಂಚಿಕೊಂಡಿದ್ದಾರೆ.

ಜಲ್ ಜೀವನ್ ಮಿಷನ್ ಯೋಜನೆ ಬಗ್ಗೆ ಮಾಹಿತಿ ನೀಡಿರುವ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸುರೇಶ ಇಟ್ನಾಳ ಅವರು, ಜಿಲ್ಲೆಯಲ್ಲಿರುವ 388 ಜನವಸತಿ ಪ್ರದೇಶಗಳ ಪೈಕಿ, 284 ಜನವಸತಿ ಪ್ರದೇಶಗಳಲ್ಲಿ ಜಲ್ ಜೀವನ್ ಮಿಷನ್ ಯೋಜನಾ ಕಾಮಗಾರಿಗಳು ಪೂರ್ಣವಾಗಿವೆ, ಉಳಿದಂತೆ 104 ಜನವಸತಿ ಪ್ರದೇಶಗಳಲ್ಲಿನ ಕಾಮಗಾರಿಗಳು ಪ್ರಗತಿಯಲ್ಲಿವೆ.  363 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು ಇಲ್ಲಿಯವರೆಗೆ 259 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ. ಜಲ್ ಜೀವನ್ ಮಿಷನ್ ಅಡಿ ಇಲ್ಲಿಯವರೆಗೆ 1,15,582 ಕುಡಿಯುವ ನೀರಿನ ನಳ ಸಂಪರ್ಕಗಳನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.

See also  ಮಡಿಕೇರಿ: ಜನಕಲ್ಯಾಣ ಕಾರ್ಯಕ್ರಮಗಳೇ ಅರಸು ನೆನಪಿನಲ್ಲಿ ಉಳಿಯಲು ಕಾರಣ- ನೀಲಗಿರಿ ತಳವಾರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು