News Kannada
Sunday, September 24 2023
ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿಯ ಪತ್ರಕರ್ತರಿಂದ ಸಿಎಂಗೆ ಮನವಿ: ಬೈಲಾ ತಿದ್ದುಪಡಿಗೆ ಒತ್ತಾಯ

Journalists in Hubballi urge CM to amend bye-laws
Photo Credit : News Kannada

ಹುಬ್ಬಳ್ಳಿ: ಮಾಧ್ಯಮ ಅಕಾಡೆಮಿಯಲ್ಲಿ ರಾಜ್ಯದ ಎಲ್ಲಾ ಭಾಗಗಳಿಗೂ ಸೂಕ್ತ ಪ್ರಾತಿನಿಧ್ಯ ಸಿಗುವಂತೆ ಬೈಲಾ ತಿದ್ದುಪಡಿ ಹಾಗೂ ಅಕಾಡೆಮಿಯ ಪ್ರಶಸ್ತಿಗಳ ಆಯ್ಕೆಗೆ ಮಾನದಂಡ ನಿಗದಿಪಡಿಸುವ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.

ಆದರ್ಶನಗರದಲ್ಲಿರುವ ತಮ್ಮ ನಿವಾಸದಲ್ಲಿ ಉತ್ತರ ಕರ್ನಾಟಕ ಪತ್ರಕರ್ತರ ನಿಯೋಗದಿಂದ ಮನವಿ ಸ್ವೀಕರಿಸಿ ಮಾತನಾಡಿದ ಅವರು, ಬೈಲಾ ಮತ್ತು ಪ್ರಶಸ್ತಿಗೆ ಮಾನದಂಡ ನಿಗದಿಗೆ ಸಮಿತಿ ರಚಿಸುವಂತೆ ಸೂಚನೆ ನೀಡಲಾಗುವುದು ಎಂದರು.

ಅಕಾಡೆಮಿಯಲ್ಲಿ ಪ್ರಾತಿನಿಧ್ಯ ಮತ್ತು ಪ್ರಶಸ್ತಿ ಎರಡೂ ವಿಷಯದಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ಮೊದಲಿನಿಂದಲೂ ಅನ್ಯಾಯವಾಗುತ್ತಿದೆ. ಇಲ್ಲಿನ ಪತ್ರಕರ್ತರು ಈಗಲಾದರೂ ಎಚ್ಚೆತ್ತಿಕೊಂಡಿರುವುದು ಸ್ವಾಗತಾರ್ಹ. ಆ ನಿಟ್ಟಿನಲ್ಲಿ ಎರಡೂ ವಿಷಯದಲ್ಲಿ ಆಗಬೇಕಾದ ಬದಲಾವಣೆಯನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಲಾಗುವುದು. ಈ ದಿಸೆಯಲ್ಲಿ ಎಲ್ಲ ಭಾಗಗಳ ಪತ್ರಕರ್ತರ ಸಹಕಾರ ಅವಶ್ಯ ಎಂದು ಹೇಳಿದರು.

ಈ ರೀತಿ ಮನವಿ ಪತ್ರದಲ್ಲಿ ಎನ್ನಿದೆ? : ಅಕಾಡೆಮಿಯ ಸದಸ್ಯರಲ್ಲಿ ಶೇ 50ರಷ್ಟು ಸದಸ್ಯತ್ವವನ್ನು ಉತ್ತರ ಕರ್ನಾಟಕ ಭಾಗಕ್ಕೆ ನೀಡಬೇಕು. ಪ್ರಶಸ್ತಿ ಆಯ್ಕೆಯ ಮಾನದಂಡಗಳು ಬದಲಾವಣೆಯಾಗಬೇಕು. ಪತ್ರಕರ್ತೆಯರಿಗೆ ಆದ್ಯತೆ ಸಿಗಬೇಕು. ಫೋಟೊ, ವಿಡಿಯೊ ಜರ್ನಲಿಸ್ಟ್, ಗ್ರಾಫಿಕ್ ಡಿಸೈನರ್/ವ್ಯಂಗ್ಯ ಚಿತ್ರಕಾರರನ್ನೂ ಪ್ರಶಸ್ತಿಗಳಿಗೆ ಪರಿಗಣಿಸಬೇಕು. ಈ ಅನ್ಯಾಯಗಳನ್ನು ಸರಿಪಡಿಸುವಂಥ ತಿದ್ದುಪಡಿ ಆಗಬೇಕು.

ಮಾರ್ಚ್ 13ರಂದು ಅಕಾಡೆಮಿಯು ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ನಿರ್ಧರಿಸಿದೆ. ಅದಕ್ಕೂ ಮೊದಲೇ ಈಗ ಘೋಷಿಸಿರುವ ನಾಲ್ಕು ವರ್ಷಗಳ ಪ್ರಶಸ್ತಿ ಪಟ್ಟಿಯನ್ನು ಆಯಾ ಪುರಸ್ಕೃತರು ಕೆಲಸ ಮಾಡುತ್ತಿರುವ ಜಿಲ್ಲೆಗಳ ಹೆಸರಿನ ಜೊತೆಗೆ ಮರು ಪ್ರಕಟಿಸಬೇಕು. ಹೀಗಾಗದಿದ್ದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಕಾಡೆಮಿ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ನಿಯೋಗ ಎಚ್ಚರಿಕೆ ನೀಡಿತು.

See also  ಕಾರವಾರ: ಕರಾವಳಿ ಉತ್ಸವದ ಕುರಿತು ಪೂರ್ವ ಸಿದ್ದತಾ ಸಭೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು