News Kannada
Friday, March 24 2023

ಹುಬ್ಬಳ್ಳಿ-ಧಾರವಾಡ

ನವಲಗುಂದ: ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಸಿಎಂ ಸಿದ್ದರಾಮಯ್ಯ

Navalgund: Former CM Siddaramaiah hits out at BJP government
Photo Credit : News Kannada

ನವಲಗುಂದ: ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರ ಎಂದರೆ “ಅಲಿ ಬಾಬಾ ಮತ್ತು ನಲವತ್ತು ಕಳ್ಳರು” (ಅಲಿಬಾಬಾ ಔರ್ ಚಾಲೀಸ್ ಚೋರ್) ಇದ್ದಂಗೆ, ಕಳ್ಳರ ಮಾತಿಗೆ ಕಿವಿಗೊಡಬೇಡಿ. ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಎಂದು ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯನವಲಗುಂದ ವಿಧಾನ ಕ್ಷೇತ್ರದ ಜನತೆಗೆ ಮನವಿ ಮಾಡಿದರು.

ಪಟ್ಟಣದಲ್ಲಿ ಪ್ರಜಾಧ್ವನಿ ಬಸ್ ಯಾತ್ರೆ ಅಂಗವಾಗಿ ಹಮ್ಮಿಕೊಂಡಿದ್ದ ಸಮಾವೇಶದಲ್ಲಿ ಮಾತನಾಡಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ರಾಜ್ಯಕ್ಕೆ ಎಷ್ಟೇ ಬಾರಿ ಬಂದು ಸುಳ್ಳು, ಅಪಪ್ರಚಾರ ಮಾಡಿದರೂ ಅದಕ್ಕೆ ಬೆಲೆ ಕೊಡಬೇಡಿ. ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಆಶೀರ್ವಾದ ಮಾಡಿ ಎಂದು ಕೈ ಮುಗಿದು ಕೇಳಿದರು. ಪ್ರಧಾನಿಯವರು ಪ್ರವಾಹ ಬಂದಾಗ, ಕೋವಿಡ್ ಬಂದಾಗ ಜನರ ಸಮಸ್ಯೆ ಆಲಿಸಲು ರಾಜಕ್ಕೆ ಒಮ್ಮೆಯೂ ಬರಲಿಲ್ಲ. ಚುನಾವಣೆ ಸಮೀಪಿಸುತ್ತಿದ್ದಂತೆ ವಾರಕ್ಕೊಮ್ಮೆ ರಾಜ್ಯಕ್ಕೆ ಬರುತ್ತಿದ್ದಾರೆ. ಕೇಂದ್ರದಲ್ಲಿ,ಮಹಾರಾಷ್ಟ್ರ ಹಾಗೂ ಗೋವಾದಲ್ಲಿ ತಮ್ಮದೇ ಸರ್ಕಾರ ಇದ್ದರೂ ಮಹದಾಯಿ ಬಗ್ಗೆ ತುಟಿ ಬಿಚ್ಚಲಿಲ್ಲ. ಇಲ್ಲಿ ಬಂದು ಖರ್ಗೆಗೆ ಅಪಮಾನ ಮಾಡಲಾಗಿದೆ ಎಂದು ಕ್ಷುಲ್ಲಕ ಭಾಷಣ ಮಾಡಿದ್ದಾರೆ, ಮೋದಿಯವರಿಗೆ ಜವಾಬ್ದಾರಿ ಇದೆಯಾ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಜಾಧ್ವನಿ ಯಾತ್ರೆ ಮಾಡುವ ಉದ್ದೇಶ ನಿಮ್ಮಸಲಹೆ, ಸೂಚನೆಗಳನ್ನು ಕೇಳುವುದಕ್ಕಾಗಿ, ನಿಮ್ಮ ಸಲಹೆ ಸೂಚನೆಯಂತೆ ನಾವು ನಡೆದುಕೊಳ್ಳುತ್ತೇವೆ. ಕೊಟ್ಟ ಮಾತು ತಪ್ಪಲ್ಲ ಎಂದರು.

ಈ ಬಾರಿ ಚುನಾವಣೆಯಲ್ಲಿ ಗೆಲ್ಲುವುದೇ ನಮ್ಮಪ್ರಥಮ ಆದ್ಯತೆಯಾಗಿದ್ದು, ಈ ಕ್ಷೇತ್ರದಲ್ಲಿ ಹೈಕಮಾಂಡ್ ಯಾರಿಗೆ ಟಿಕೆಟ್ ನೀಡುತ್ತದೆಯೋ ಆ ಅಭ್ಯರ್ಥಿಯನ್ನು ಬೆಂಬಲಿಸಿ ಎಂದು ಮನವಿ ಮಾಡಿದರು.

See also  ಮುಂಡಾಜೆ ಶತಮಾನೋತ್ಸವ ಧ್ವಜಾರೋಹಣ: ಧ್ವಜ ಕಟ್ಟೆ ಉದ್ಘಾಟನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು