News Kannada
Wednesday, October 04 2023
ಹುಬ್ಬಳ್ಳಿ-ಧಾರವಾಡ

ಧಾರವಾಡ: ಮಾಜಿ ಸಚಿವ ನಿವಾಸಕ್ಕೆ ಅನಾಮಧೇಯ ಪತ್ರ- ಪೊಲೀಸ್ ಆಯುಕ್ತರಿಗೆ ಪತ್ನಿ ದೂರು

Dharwad: Wife files anonymous letter to former minister's residence, lodges complaint with police commissioner
Photo Credit : News Kannada

ಧಾರವಾಡ: ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ನಿವಾಸಕ್ಕೆ ಅನಾಮಧೇಯ ಪತ್ರಗಳು ಬರುತ್ತಿದ್ದು, ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ವಿನಯ್ ಕುಲಕರ್ಣಿ ಅವರ ಪತ್ನಿ ಶಿವಲೀಲಾ ಕುಲಕರ್ಣಿ ಅವರು ಹುಬ್ಬಳ್ಳಿ, ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ರಮಣ್ ಗುಪ್ತಾ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಈ ಹಿಂದೆ ಇದೇ ರೀತಿ ಅನಾಮಧೇಯ ಪತ್ರಗಳು ಬಂದಾಗ ಧಾರವಾಡ ಉಪನಗರ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಆದರೆ, ಇದುವರೆಗೂ ಯಾವುದೇ ರೀತಿಯ ಕ್ರಮ ಜರುಗಿಸಿಲ್ಲ. ಅಲ್ಲದೇ ಈ ರೀತಿಯ ಅನಾಮಧೇಯ ಪತ್ರಗಳು ಬಂದಾಗ ನಮ್ಮ ಮನೆಗೆ ನೀಡದಂತೆ ಅಂಚೆ ಇಲಾಖೆಯವರಿಗೆ ಸೂಚನೆ ನೀಡಬೇಕು.

ಈಗ ಚುನಾವಣೆ ಬಂದಿರುವುದರಿಂದ ಈ ರೀತಿಯ ಅನಾಮಧೇಯ ಪತ್ರಗಳು ಮತ್ತೆ ನಮ್ಮ ಬೆಂಗಳೂರು ಹಾಗೂ ಧಾರವಾಡ ನಿವಾಸಕ್ಕೆ ಬರುತ್ತಿದ್ದು, ಈ ಸಂಬಂಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಶಿವಲೀಲಾ ಕುಲಕರ್ಣಿ ಅವರು ಒತ್ತಾಯಿಸಿದ್ದಾರೆ.

See also  ಸಕಲೇಶಪುರ: ವಸತಿ ರಹಿತರಿಗೆ ಸೂರು ಕಲ್ಪಿಸುವ ಚಿಂತನೆ- ಶಾಸಕ ಎಚ್ ಕೆ ಕುಮಾರಸ್ವಾಮಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು