News Kannada
Thursday, March 23 2023

ಹುಬ್ಬಳ್ಳಿ-ಧಾರವಾಡ

ರಾಣಿ ಚೆನ್ನಮ್ಮ ಈದ್ಗಾ ಮೈದಾನದಲ್ಲಿ ಕಾಮಣ್ಣನ ಪ್ರತಿಷ್ಠಾಪನೆಗೆ ಅನುಮತಿ ಇಲ್ಲ- ರಮಣ ಗುಪ್ತಾ

Hubballi: No permission for consecration of Kamanna at Rani Chennamma Idgah Ground: Raman Gupta
Photo Credit : News Kannada

ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಒಂದು ದಿನವಾಗಲಿ, ಒಂದು ಕ್ಷಣವಾಗಲಿ ಕಾಮಣ್ಣನ ಪ್ರತಿಷ್ಠಾಪನೆಗೆ ಅವಕಾಶ ಇಲ್ಲ. ಆಯೋಜಕರು 10 ದಿನ ಮೊದಲೇ ಮನವಿ ಕೊಟ್ಟಿದ್ದರೇ ನಮಗೆ ಬಂದೋಬಸ್ತ್ ಗೆ ಸಮಸ್ಯೆ ಆಗುತ್ತಿರಲ್ಲಿಲ್ಲಾ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರಾದ ರಮಣ ಗುಪ್ತಾ ಹೇಳಿದರು.

ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ದೊಡ್ಡ ನಗರವಾದ ಕಾರಣ ಬಂದೋಬಸ್ತ್ ಅನಿವಾರ್ಯವಾಗಿರುತ್ತದೆ. ನಾವು ಮೊದಲೇ ಮನವಿ ಕೊಟ್ಟಿದ್ದರೇ, ಎಲ್ಲಿ ಅವಶ್ಯಕತೆ ಇದೆಯೋ ಅಲ್ಲಿ ಪೊಲೀಸ್ ನಿಯೋಜನೆ, ಸಿಸಿ ಕ್ಯಾಮೆರಾ ಅಳವಡಿಕೆ ಮಾಡುತ್ತಿದ್ದೆವು. ಈಗಾಗಲೇ ನಗರದಲ್ಲಿ 472 ಕಾಮಣ್ಣನ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ. ಆದರೆ ಇವೆಲ್ಲ ಒಂದೇ ದಿನ ಪ್ರತಿಷ್ಠಾಪನೆ ಆಗಿವೆ ಎಂದರು.

ನಮ್ಮ ಪೊಲೀಸ್ ಸಿಬ್ಬಂದಿ ಡಿವೈಡ್ ಆಗಿದೆ. ಕಾಮಣ್ಣನ ಮೂರ್ತಿ ಪ್ರತಿಷ್ಠಾಪನೆ ವಿಚಾರವಾಗಿ ಕೆಲವು ಮಾಹಿತಿ ಬಂದಿವೆ. ಕಾನೂನು ಸುವ್ಯವಸ್ಥೆ ವಿಚಾರವಾಗಿ ಮಾಹಿತಿ ಬಂದಿದೆ. ಗುಪ್ತಚರ ಪೊಲೀಸ್ ಮೂಲಗಳ ಮಾಹಿತಿ ಬಂದಿದೆ. ಕಾಮಣ್ಣನ ಮೂರ್ತಿ ಪ್ರತಿಷ್ಠಾಪನೆ ವಿಚಾರವಾಗಿ ಬೇರೆ ಮಾಹಿತಿಗಳು ಬಂದಿವೆ. ಈ ನಿಟ್ಟಿನಲ್ಲಿ ಒಂದು ದಿನ ಆಗಲಿ, ಒಂದು ಕ್ಷಣ ಆಗಲಿ ಅವಕಾಶ ಇಲ್ಲ ಎಂದ ಕಮಿಷನರ್ ಮಾಹಿತಿ ನೀಡಿದರು.

ಪ್ರಧಾನಿ ಆಗಮನ ಹಿನ್ನಲೆ ಭದ್ರತಾ ದೃಷ್ಟಿಯಿಂದ ಪ್ರತಿಪ್ಠಾಪನೆಗೆ ಅವಕಾಶ ನೀಡಿಲ್ಲ: ಪಾಲಿಕೆ ಆಯುಕ್ತ ಗೋಪಾಲಕೃಷ್ಣ

ರಾಣಿ ಚೆನ್ನಮ್ಮ ಈದ್ಗಾ ಮೈದಾನದಲ್ಲಿ ಕಾಮಣ್ಣನ ಮೂರ್ತಿ ಪ್ರತಿಷ್ಠಾಪನೆ ವಿಚಾರಕ್ಕೆ ಪಾಲಿಕೆಗೆ ಹೋಳಿ ಹುಣ್ಣಿಮೆ ಪ್ರಯುಕ್ತ ಕಾಮಣ್ಣನ ಪ್ರತಿಷ್ಠಾಪನೆ ಮಾಡಲು ಗಜಾನನ ಉತ್ಸವ ಮಹಾಮಂಡಳಿಯಿಂದ ಮನವಿ ಕೊಟ್ಟಿತ್ತು. ಆದರೆ ಸೂಕ್ತ ಬಂದೋಬಸ್ತ್ ಇಲ್ಲದ ಕಾರಣ ನಾವು ಅನುಮತಿ ಕೊಟ್ಟಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ಬರುವ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ಕಾಮಣ್ಣನ ಮೂರ್ತಿ ಪ್ರತಿಷ್ಠಾಪನೆ ಅರ್ಜಿಯನ್ನು ಪರಿಗಣಿಸಲಿಲ್ಲ ಎಂದು ಪಾಲಿಕೆ ಆಯುಕ್ತ ಡಾ. ಬಿ ಗೋಪಾಲಕೃಷ್ಣ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ನಾವು ಈಗಾಗಲೇ ಆಯೋಜಕರನ್ನು ಕರೆದು ಹೇಳಿದ್ದೇವೆ. ಮೇಯರ್ ಅವರು ಸದಸ್ಯರೊಂದಿಗೆ ಚರ್ಚೆ ಮಾಡಿ ಅವರ ನಿಲುವು ಹೇಳಿದ್ದಾರೆ. ಆದರೆ ಅಂತಿಮವಾಗಿ ಆಯುಕ್ತರೇ ಅನುಮತಿ ಕೊಡಬೇಕಾದವರು. ಹೀಗಾಗಿ ಭದ್ರತಾ ದೃಷ್ಟಿಯಿಂದ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚೆ ಮಾಡಿದ್ದೇವೆ. ಪ್ರಧಾನಿ ಮೋದಿ ಆಗಮದಿಂದಾಗಿ ಪೊಲೀಸ್ ಬಂದೋಬಸ್ತ್ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿ ಧಾರವಾಡಕ್ಕೆ ಹೋಗುತ್ತಾರೆ. ಆದರೆ ಇದೇ ಏಳರಂದು ಮನವಿ ಪರಿಗಣಿಸಲಾಗಿಲ್ಲ ಎಂದು ಆಯುಕ್ತ ಡಾ. ಬಿ ಗೋಪಾಲಕೃಷ್ಣ ತಿಳಿಸಿದ್ದಾರೆ.

ಮೇಯರ್ ಅವರು ತಮ್ಮ ಅಭಿಪ್ರಾಯ ಹೇಳಿದ್ದಾರೆ. ನಮ್ಮ ಫೋಕಸ್ ಮೋದಿ ಅವರ ಕಾರ್ಯಕ್ರಮ ಇರುವ ಕಾರಣ ಆಯೋಜಕರಿಗೆ ತಿಳಿಸಿದ್ದೇವೆ. ಮೋದಿ ಅವರು ಐಐಟಿ ಉದ್ಘಾಟನೆಗೆ ಬರೋ ಕಾರಣ ನಾವು ಅರ್ಜಿಯನ್ನು ಪರಿಗಣಿಸಲಿಲ್ಲ. ನಾವು ಮುಂಜಾಗೃತ ಕ್ರಮದಿಂದ ಈದ್ಗಾ ಮೈದಾನದಲ್ಲಿ ಕಾಮಣ್ಣನ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಕೊಡಲಿಲ್ಲ. ನನಗೆ ಯಾವುದೇ ರಾಜಕೀಯ ನಾಯಕರು ಒತ್ತಡ ಹಾಕಿಲ್ಲ ಎಂದರು.

See also  ಬೆಂಗಳೂರು: ಎನ್‌ಎಸಿ ದಶಮಾನೋತ್ಸವ ಅಂಗವಾಗಿ ನೆಟ್ಟಕಲ್ಲಪ್ಪ ಅಖಿಲ ಭಾರತ ಈಜು ಚಾಂಪಿಯನ್‌ಷಿಪ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು