News Kannada
Wednesday, May 31 2023
ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ : ಸೋಮಣ್ಣ ನಮ್ಮ ಜೊತೆಗಿದಾರೆ, ನಮ್ಮ ಜೊತೆಗೇ ಇರ್ತಾರೆ : ಸಿಎಂ ವಿಶ್ವಾಸ

Differences of opinion will end soon: CM Bommai
Photo Credit : News Kannada

ಹುಬ್ಬಳ್ಳಿ : ದೇಶಕ್ಕೆ ಮೋದಿ ಆಪತ್ಬಾಂಧವ.ನಾವು ಮೋದಿ ಅವರನ್ನ ದೇವರು ಅಂದಿಲ್ಲ. ಮೋದಿ ಅವರೂ ತಮ್ಮನ್ನು ದೇವರು ಅಂತ ಅಂದುಕೊಂಡಿಲ್ಲ . ನರೇಂದ್ರ ಮೋದಿ ಅವರು ಒಬ್ಬ ಮಹಾನ್ ನಾಯಕ ಎಂದು ಮೋದಿ ದೇವರು ಎಂಬ ಕಾಂಗ್ರೆಸ್ ಟೀಕೆ ವಿಚಾರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿ ಗಡಿಯಲ್ಲಿ ಭದ್ರತೆ ನೀಡಿ ಅತ್ಯಂತ ಕಷ್ಟಕಾಲದಲ್ಲಿ ಭಾರತವನ್ನು ಎತ್ತಿ ಹಿಡಿದಿದ್ದಾರೆ.ಆಂತರಿಕ ಸುರಕ್ಷತೆ ತಂದು ದೇಶ ಸುಭದ್ರಗೊಳಿಸಿದ್ದಾರೆ.ಸಾರ್ವಜನಿಕವಾಗಿ ಯಾರೇ ಬಂದ್ರೂ ಮೋದಿ ನಮಸ್ಕಾರ ಮಾಡ್ತಾರೆ ಎಂದರು.

ರೌಡಿಶೀಟರ್ ಫೈಟರ್ ರವಿಗೆ ಮೋದಿ ನಮಸ್ಕಾರ ಪ್ರಧಾನಿ ಹುದ್ದೆಗೆ ಕಳಂಕ ತಂದಿದ್ದಾರೆ ಎಂಬ ಕಾಂಗ್ರೆಸ್ ಟ್ವೀಟ್ ಗೆ ಪ್ರತಿಕ್ರಿಯಿಸಲು ನಿರಾಕರಿಸಿದರು.

ಸೋಮಣ್ಣ ನಮ್ಮ ಜೊತೆಗಿದಾರೆ, ನಮ್ಮ ಜೊತೆಗೇ ಇರ್ತಾರೆ : ನಿನ್ನೆ ಹುಬ್ಬಳ್ಳಿಯಲ್ಲಿ ಯಾವುದೇ ರೀತಿಯ ಮಾತುಕತೆ ಮಾಡಿಲ್ಲ. ಸೋಮಣ್ಣ ನಾನು ಹಳೆಯ ಸ್ನೇಹಿತರು ಅವರು ನಮ್ಮ ಭೇಟಿ ಕೇವಲ ಔಪಚಾರಿಕ ಸೋಮಣ್ಣ ನಮ್ಮ ಜೊತೆಗಿದಾರೆ, ನಮ್ಮ ಜೊತೆಗೇ ಇರ್ತಾರೆ ಎಂದರು.

ಕರ್ನಾಟಕದಲ್ಲಿ ಮೋದಿ ಸುನಾಮಿ ಶುರುವಾಗಿದೆ. ಪ್ರಧಾನಿ ಮೋದಿ ಅವರು ರಾಜ್ಯದ ಹಲವೆಡೆ ಪ್ರಚಾರ ಮಾಡಿದ್ದಾರೆ ಅವರು ಬಂದು ಹೋಗಿದ್ದರಿಂದ ಮೋದಿ ಮತ್ತು ಬಿಜೆಪಿ ಪರ ಒಲವು ಹೆಚ್ಚಾಗಿದೆ . ರಾಜ್ಯದಲ್ಲಿ ಮೋದಿ ಸುನಾಮಿ ಎದ್ದಿದೆ. ಕಾಮಗಾರಿಗಳ ಸಹಜವಾಗಿಯೇ ಕ್ರೆಡಿಟ್ ವಾರ್ ಇದೆ. ಪಕ್ಕದ ಮನೆಯವಳು ಗಂಡು ಹಡೆದರೆ ಇವರು ಪೇಡೆ ಹಂಚುವ ಕೆಲಸ ಮಾಡ್ತಿದಾರೆ ಎಂದು ಕಾಂಗ್ರೆಸ್ ಗೆ ಟಾಂಗ್ ಕೊಟ್ಟರು.

ಹೆಸ್ಕಾಂ ಮತ್ತು ಕೆಪಿಟಿಸಿಎಲ್ ಮುಷ್ಕರ ಕರೆ ಪ್ರತಿಕ್ರಿಯಿಸಿದ ಸಿಎಂ: ಅವರ ಜೊತೆ ನಮ್ಮವರು ಮಾತುಕತೆ ನಡೆಸಿದ್ದಾರೆ. ಇಂಧನ ಸಚಿವರು ಚರ್ಚೆಯಲ್ಲಿದ್ದಾರೆ. ಕೂಡಲೇ ಅದನ್ನು ಬಗೆಹರಿಸುತ್ತಾರೆ ಎಂದು ಹೆಸ್ಕಾಂ ಮತ್ತು ಕೆಪಿಟಿಸಿಎಲ್ ಮುಷ್ಕರ ಕರೆ ವಿಚಾರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ನಮ್ಮ ಸಚಿವರು ಈಗಾಗಲೇ ಎರಡು ಸುತ್ತಿನ ಮಾತುಕತೆ ಮಾಡಿದ್ದಾರೆ.ಎಲ್ಲ ವಿವರಗಳನ್ನ ಹಂಚಿಕೊಳ್ಳೋಕೆ ಆಗಲ್ಲ ಎಂದರು.

See also  ಹುಬ್ಬಳ್ಳಿ: ಆನೆ ದಂತ ಕಲಾಕೃತಿ ಮಾರಾಟ ಮಾಡುತ್ತಿದ್ದ 5 ದಂತ ಚೋರರ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು