News Kannada
Sunday, October 01 2023
ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ: ಬಿಎಸ್ ವೈ ಮನೆ ಮೇಲೆ ಕಲ್ಲು ತೂರಾಟ ರಾಜಕೀಯ ಪ್ರೇರಿತ- ಅರವಿಂದ ಬೆಲ್ಲದ

Hubballi: Stones pelted at BSY's house politically motivated, says Aravind Bellada
Photo Credit : News Kannada

ಹುಬ್ಬಳ್ಳಿ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಮನೆಯ ಮೇಲಿನ ಕಲ್ಲು ತೂರಾಟ ರಾಜಕೀಯ ಪ್ರೇರಿತ ದಾಳಿಯಾಗಿದೆ ಎಂದು ಶಾಸಕ ಅರವಿಂದ ಬೆಲ್ಲದ್ ತಿಳಿಸಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಳಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಬಂಜಾರ ಸಮೂದಾಯದ ಪ್ರತಿಭಟನೆ ವೇಳೆಯಲ್ಲಿ ಮನೆಯ ಮೇಲೆ ಕಲ್ಲು ತೂರಾಟ ಮಾಡಲಾಗಿದೆ. ಕಲ್ಲು ತೂರಿದವರು ನಿಜವಾದ ಮೀಸಲಾತಿ ಬಗ್ಗೆ ಕಳಕಳಿ ಇದ್ದವರಲ್ಲ. ಒಳಮೀಸಲಾತಿ ಕೊರಚ, ಭೋವಿ – ವಡ್ಡರು ಶೇ.03 ರಷ್ಟು ಮೀಸಲಾತಿ ಕೇಳಿದ್ದರು. ಆದರೆ ಸರ್ಕಾರ ಅದಕ್ಕಿಂತಲೂ ಹೆಚ್ಚು ಮೀಸಲಾತಿ ಕೊಟ್ಟಿದೆ. ಎಡಗೈ ಮತ್ತು ಬಲಗೈ ಬೇಡಿಕೆಯಂತೆ ಒಳಮೀಸಲಾತಿ ಕೊಟ್ಟಿದ್ದೇವೆ. ನಮ್ಮ ಸರ್ಕಾರ ಜಾಣತನದ ನಡೆ ಅನುಸರಿಸಿದೆ ಎಂದರು.

ಜನರ ಅಪೇಕ್ಷೆಗೆ ತಕ್ಕಂತೆ ಚುನಾವಣೆಗೆ ಕೊಟ್ಟಿದ್ದೇವೆ.‌ ಲಿಂಗಾಯಿತ ಸಮುದಾಯಕ್ಕೂ ಹೆಚ್ಚು ಮೀಸಲಾತಿ ಕೊಟ್ಟಿದೆ. ನಿಜವಾದ ಹೋರಾಟ ಮಾಡುತ್ತಿದ್ದವರಿಗೆ ಮೀಸಲಾತಿ ಖುಷಿಯಾಗಿದೆ. ಕಾಂಗ್ರೆಸ್ ನಾಯಕರಿಗೆ ಮಾತ್ರ ಕಸಿವಿಸಿಯಾಗಿದೆ ಎಂದು ತಿಳಿಸಿದರು.

ಅಂಚಟಗೇರಿ ಟಿಕೇಟ್ ಕೇಳುತ್ತಿರೊ ವಿಚಾರವಾಗಿ ಮಾತನಾಡಿ, ಈರೇಶ ಅಂಚಟಗೇರಿ ಅವರು ತಮ್ಮ ಆಸೆಯಂತೆ ಟಿಕೆಟ್ ಕೇಳಿದ್ದಾರೆ. ಹೈಕಮಾಂಡ್ ಸೂಕ್ತ ನಿರ್ಧಾರ ಕೈಗೊಳ್ಳುತ್ತೆ, ನನಗೆ ಯಾರೇ ಎದುರಾಳಿಯಾದ್ರೂ ಕಳೆದ ಬಾರಿಗಿಂತ ಹೆಚ್ಚು ಮತಗಳ ಅಂತರದಿಂದ ಗೆಲ್ತೇನೆ ಎಂದು ಅರವಿಂದ ಬೆಲ್ಲದ್ ತಿಳಿಸಿದರು.

See also  ರೈಲ್ವೆ ಇಲಾಖೆ 904 ಹುದ್ದೆಗಳಿಗೆ ಅರ್ಜಿ ಆಹ್ವಾನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು