News Kannada
Monday, June 05 2023
ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ: ಕಾಂಗ್ರೆಸ್ ತಿರುಕನ ಕನಸು ಕಾಣುತ್ತಿದೆ- ಜಗದೀಶ್ ಶೆಟ್ಟರ್

BJP leaders visit Joshi's house demanding ticket for Shettar
Photo Credit : News Kannada

ಹುಬ್ಬಳ್ಳಿ: ಕಾಂಗ್ರೆಸ್ ತಿರುಕನ ಕನಸು ಕಾಣುತ್ತಿದೆ. ಕಾಂಗ್ರೆಸ್ ನವರು ಅಧಿಕಾರಕ್ಕೆ ಬರಲ್ಲ ಎಂದು ನಾನು ಸ್ಪಷ್ಟವಾಗಿ ಹೇಳ್ತೀನಿ. ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಬಗ್ಗೆ ನೀರಿಕ್ಷೆ ಇತ್ತು. ಇವತ್ತು ಚುನಾವಣೆ ಘೋಷಣೆಯಾಗಿದೆ. ಬಿಜೆಪಿ ಚುನಾವಣೆಗೆ ಅಣಿಯಾಗಿದೆ. ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿ ಹಾಗೂ ಅಮಿತ್ ಶಾ ರಾಜ್ಯದಲ್ಲಿ ಪ್ರವಾಸ ಮಾಡಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಪೂರಕ ವಾತಾವರಣ ಇದೆ.

ಜನರಿಂದ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ಈ ಬಾರಿ ಬಿಜೆಪಿಗೆ ಸ್ಪಷ್ಟ ಬಹುಮತ ಸಿಗಲಿದೆ . ಕಳೆದ ಎರಡು ಬಾರಿ ನಮಗೆ ಸ್ವಲ್ಪ‌ ಕಡಿಮೆ ಸ್ಥಾನ ಬಂದಿತ್ತು. ಡಿಕೆಶಿವಕುಮಾರ್ ವಿರೋಧ ಪಕ್ಷದಲ್ಲಿ ಇದ್ದಾರೆ.ಅವರು ಹಾಗೇ ಹೇಳಬೇಕಾಗುತ್ತೆ. ಬಿಜೆಪಿ ಅಭ್ಯರ್ಥಿಗಳ ಪಟ್ಟಿ ವಿಚಾರವಾಗಿ ಇನ್ಮೇಲೆ ಗಂಭೀರವಾಗಿ ಚರ್ಚೆ ಆಗತ್ತೆ.ಯಾರ ನಾಯಕತ್ವದಲ್ಲಿ ಚುನಾವಣೆ ಅನ್ನೋದನ್ನ ಹೈಕಮಾಂಡ್ ತೀರ್ಮಾನ ಮಾಡತ್ತೆ‌. ಇದೊಂದು ರಾಜಕೀಯ ವ್ಯವಸ್ಥೆ, ಇದರಿಂದಾಗಿ ರಾಜಕಾರಣದ ಮೇಲೆ ಪರಿಣಾಮ ಬೀರುವುದಿಲ್ಲ ಎಂದರು.

ಚುನಾವಣೆ ದಿನಾಂಕ ನಿಗದಿ ಸ್ವಾಗತಾರ್ಹವಾಗಿದೆ : ಶೆಟ್ಟರ್
ಕರ್ನಾಟಕ ರಾಜ್ಯದ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ನಿಗದಿ ಮಾಡಿರುವುದು ಸ್ವಾಗತಾರ್ಹವಾಗಿದೆ. ಪೊಲೀಸ್ ಇಲಾಖೆ ಹಾಗೂ ಚುನಾವಣಾ ಆಯೋಗ ವ್ಯವಸ್ಥಿತ ರೀತಿಯಲ್ಲಿ ಚುನಾವಣೆ ನಡೆಸಬೇಕು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.

ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಮಾಧ್ಯಮಕ್ಕೆ ಮಾಹಿತಿ ನೀಡಿರುವ ಅವರು, ಮೇ ಮೊದಲ ವಾರ ಅಥವಾ ಎರಡನೇ ವಾರದಲ್ಲಿ ಚುನಾವಣೆ ನಡೆಸುವ ನಿರೀಕ್ಷೆ ಇತ್ತು. ಈ ನಿಟ್ಟಿನಲ್ಲಿ ಈಗ ಚುನಾವಣೆ ಆಯೋಗ ಈಗ ದಿನಾಂಕ ಘೋಷಣೆ ಮಾಡಿದೆ. ಮೇ 10ಕ್ಕೆ ಚುನಾವಣೆ 13ರಂದು ಫಲಿತಾಂಶ ಎಂಬ ನಿರ್ಧಾರವನ್ನು ಕೈಗೊಂಡಿರುವುದು ಸ್ವಾಗತಾರ್ಹವಾಗಿದೆ ಎಂದರು.

ನೀತಿ ಸಂಹಿತೆಯನ್ನು ಕಾಪಾಡುವ ಮತ್ತು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಚುನಾವಣೆ ನಡೆಸುವ ಕಾರ್ಯವನ್ನು ಸರ್ಕಾರ ಅಧಿಕಾರಿಗಳು ಹಾಗೂ ಚುನಾವಣಾ ಆಯೋಗ ಮಾಡಬೇಕಿದೆ ಎಂದು ಅವರು ಸಲಹೆ ನೀಡಿದರು. ಮತದಾರರು ಯಾವುದೇ ರೀತಿಯಲ್ಲಿ ಹಣದ ಆಮಿಷಕ್ಕೆ ಒಳಗಾಗಬಾರದು. ಅಲ್ಲದೇ ಚುನಾವಣಾ ಆಯೋಗವು ನಿಯಮ ಉಲ್ಲಂಘನೆ ಮಾಡುವವರು ಯಾವುದೇ ಪಕ್ಷದವರು ಆಗಿದ್ದರೂ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

See also  ಹುಬ್ಬಳ್ಳಿ: ಯುವ ಜನತೆ, ಮಕ್ಕಳು ಸ್ವಾತಂತ್ರ್ಯ ಹೋರಾಟ ಇತಿಹಾಸ ಅರಿಯಬೇಕೆಂಬುದು ಪ್ರಧಾನಿಯವರ ಆಶಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು