News Kannada
Saturday, June 03 2023
ಹುಬ್ಬಳ್ಳಿ-ಧಾರವಾಡ

ಧಾರವಾಡ: ವಿನಯ ಕುಲಕರ್ಣಿ ಮನೆಮುಂದೆ ಉಪವಾಸ ಸತ್ಯಾಗ್ರಹ

Dharwad: Hunger strike in front of Vinay Kulkarni's house
Photo Credit : News Kannada

ಧಾರವಾಡ: ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಧಾರವಾಡದ ಮನೆ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ವಿನಯ್ ಅವರ ಅಭಿಮಾನಿಗಳು ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ವಿನಯ್ ಕುಲಕರ್ಣಿ ಅವರನ್ನೇ ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಬೇಕು. ಯೋಗೀಶಗೌಡ ಗೌಡರ ಕೊಲೆ ಪ್ರಕರಣದಡಿ ಜೈಲುವಾಸ ಅನುಭವಿಸಿ ಬಂದು ಇದೀಗ ಜಾಮೀನಿನ ಮೇಲೆ ಹೊರಗಿರುವ ವಿನಯ್ ಅವರಿಗೆ ಧಾರವಾಡ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

ಸದ್ಯ ವಿಧಾನಸಭೆ ಚುನಾವಣೆ ಬಂದಿದ್ದು, ವಿನಯ್ ಅವರನ್ನು ಕಾಂಗ್ರೆಸ್ ಪಕ್ಷ ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂದು ಘೋಷಣೆ ಮಾಡಬೇಕು ಎಂದು ಒತ್ತಾಯಿಸಿ ಅವರ ಬೆಂಬಲಿಗರು ವಿನಯ್ ಅವರ ನಿವಾಸದೆದುರು ಧರಣಿ ಆರಂಭಿಸಿದ್ದಾರೆ.

ವಿನಯ್ ಅವರು ಶಾಸಕರಿದ್ದಾಗ ಧಾರವಾಡ ಗ್ರಾಮಾಂತರ ಕ್ಷೇತ್ರಕ್ಕೆ ದೊಡ್ಡ ಪ್ರಮಾಣದಲ್ಲಿ ಅನುದಾನ ತಂದು ಕೆಲಸ ಮಾಡಿಸಿದ್ದಾರೆ. ಪ್ರಸಕ್ತ ವರ್ಷ ಅವರ ಪರವಾಗಿಯೇ ಅಲೆ ಇದ್ದು, ಅವರು ಜಿಲ್ಲೆಯಿಂದ ಹೊರಗಿದ್ದರೂ ಚುನಾಯಿತರಾಗಿ ಬರುತ್ತಾರೆ. ಅವರಿಗೆ ಶಿಗ್ಗಾಂವಿ ಸೇರಿದಂತೆ ಬೇರೆ ಬೇರೆ ಕಡೆ ಟಿಕೆಟ್ ನೀಡದೇ ಅವರನ್ನು ಧಾರವಾಡ ಗ್ರಾಮೀಣ ಕ್ಷೇತ್ರದ ಅಭ್ಯರ್ಥಿಯನ್ನಾಗಿಯೇ ಪಕ್ಷ ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ಕಾರ್ಯಕರ್ತರು ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ಈ ಸನ್ನಿವೇಶವನ್ನು ಕಾಂಗ್ರೆಸ್ ಪಕ್ಷ ಯಾವ ರೀತಿ ನಿಭಾಯಿಸಿ, ವಿನಯ್ ಅವರನ್ನು ಯಾವ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡುತ್ತದೆಯೋ ಕಾದು ನೋಡಬೇಕಿದೆ.

See also  ಬೀದರ್‌: ಪಶು ವಿವಿ ಸಮಗ್ರ ಅಭಿವೃದ್ಧಿಗೆ ಬದ್ಧ - ಸಚಿವ ಪ್ರಭು ಚವ್ಹಾಣ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು