News Kannada
Sunday, June 04 2023
ಹುಬ್ಬಳ್ಳಿ-ಧಾರವಾಡ

ಕಾಂಗ್ರೆಸ್ ಪಕ್ಷದವರು ಹತಾಶೆಯಿಂದ ಮೀಸಲಾತಿಯನ್ನು ವಿರೋಧಿಸುತ್ತಿದ್ದಾರೆ : ಬಸವರಾಜ ಬೊಮ್ಮಾಯಿ

The Congress party is opposing reservation out of desperation.
Photo Credit : News Kannada

ಹುಬ್ಬಳ್ಳಿ: ನಾವು ಶ್ರದ್ದೆ, ನಿಷ್ಠೆಯಿಂದ ಹಿಂದೂಳಿದ ವರ್ಗಗಳಿಗೆ ಮೀಸಲಾತಿ ಕೊಡುವ ಕೆಲಸ ಮಾಡಿದ್ದೇವೆ. ಈ ಮೂಲಕ ನೊಂದ ಹಿಂದೂಳಿದ, ದೀನ ದಲಿತರಿಗೆ ಶಾಶ್ವತ ಪರಿಹಾರ ಕೊಡುವ ಕೆಲಸವನ್ನು ಮಾಡಿದ್ದೇವೆ. ಇದನ್ನು ಸಹಿಸದೇ ಕಾಂಗ್ರೆಸ್ ಪಕ್ಷದವರು ಹತಾಶೆಯಿಂದ ಮೀಸಲಾತಿಯನ್ನು ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರಿಗೆ ಮೀಸಲಾತಿ ತಿರುಗುಬಾಣ ಆಗುತ್ತದೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ, ಈವರೆಗೆ ಕಾಂಗ್ರೆಸ್ ಪಕ್ಷದವರಿಗೆ ಎಲ್ಲ ವಿಷಯದಲ್ಲಿ ತಿರುಗುಬಾಣ ಆಗಿದೆ. ಹೀಗಾಗಿ ಎಲ್ಲರಿಗೂ ತಿರುಗುಬಾಣ ಆಗುತ್ತದೆ ಎಂದು ತಿಳಿದುಕೊಂಡಿದ್ದಾರೆ. ನಾವು ಶ್ರದ್ದೆಯಿಂದ ನಿಷ್ಠೆಯಿಂದ ಮೀಸಲಾತಿ ಕೊಟ್ಟಿದ್ದೇವೆ. ಹೀಗಾಗಿ ಕಾಂಗ್ರೆಸ್’ನವರು ಮಾಡಲಾಗದ ಕೆಲಸವನ್ನು ನಾವು ಮಾಡಿದ್ದೇವೆ. ಅವರಿಗೆ ರಾಜಕೀಯ ಇಚ್ಛಾಶಕ್ತಿ ಇರಲಿಲ್ಲ. ಡೊಂಗಿತನ ಇತ್ತು. ನಾವು ಇಚ್ಛಾಶಕ್ತಿ ಪ್ರದರ್ಶನ ಮಾಡಿದ್ದೇವೆ. ಹೀಗಾಗಿ ಅವರು ಹತಾಶೆಯಿಂದ ಮಾತನಾಡುತ್ತಾರೆ ಎಂದರು.

ಕಾಂಗ್ರೆಸ್ ಪಕ್ಷದ ಎರಡನೇ ಪಟ್ಟಿ ಬಿಡುಗಡೆ ವಿಚಾರವಾಗಿ ಮಾತನಾಡಿ, ಈಗಾಗಲೇ ನಿನ್ನೆ ನಮ್ಮ ಪಕ್ಷದ ರಾಜ್ಯ ಕಾರ್ಯಕಾರಣಿ ಸಭೆ ಆಗಿದೆ.‌ ಬರುವ ಏ. 8 ರಂದು ಮತ್ತೊಂದು ಸುತ್ತಿನ ಸಭೆ ನಡೆಸಿ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದರು.

ವಿನಯ ಕುಲಕರ್ಣಿ ಆಯ್ಕೆ ಕಾಂಗ್ರೆಸ್ ಗೆ ಬಿಟ್ಟಿದ್ದು : 
ಅದು ಕಾಂಗ್ರೆಸ್ ಪಕ್ಷಕ್ಕೆ ಬಿಟ್ಟದ್ದು, ಅಲ್ಲದೇ ಧಾರವಾಡ ಜಿಲ್ಲೆಗೆ ವಿನಯ ಕುಲಕರ್ಣಿ ಬರುವ ವಿಷಯ ಕೋರ್ಟಿನಲ್ಲಿದೆ. ಹೀಗಾಗಿ ಹೆಚ್ಚು ಟೀಕೆ, ಟಿಪ್ಪಣಿ ಮಾಡುವುದಿಲ್ಲ ಎಂದು ಧಾರವಾಡ ಗ್ರಾಮೀಣ ಕ್ಷೇತ್ರಕ್ಕೆ ಕಾಂಗ್ರೆಸ್ ವಿನಯ ಕುಲಕರ್ಣಿ ಅವರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಿದ ವಿಷಯಕ್ಕೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿದರು ‌.

ನಾನು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಶಿಗ್ಗಾಂವಿ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇನೆ. ಯಾರು ಊಹಾಪೋಹಗಳಿಗೆ ಕಿವಿಕೊಡಬೇಡಿ ಎಂದು ಬಸವರಾಜ ಬೊಮ್ಮಾಯಿ ತಾವು ಸ್ಪರ್ಧಿಸುವ ಕ್ಷೇತ್ರದ ಕುರಿತು ಸ್ಪಷ್ಟನೆ ನೀಡಿದರು.

ಸ್ಟಾರ್ ನಟರ ಪ್ರಚಾರದ ವಿಚಾರವಾಗಿ ಮಾತನಾಡಿ, ಪವನ್ ಕಲ್ಯಾಣ ಪ್ರಚಾರಕ್ಕೆ ಆಗಮಿಸುವ ವಿಷಯ ಗೊತ್ತಿಲ್ಲ. ಆದರೆ ಅವರು ನಮ್ಮ ರಾಷ್ಟ್ರೀಯ ನಾಯಕರನ್ನು ಭೇಟಿ ಆಗಿದ್ದಾರೆ. ಹೀಗಾಗಿ ಕಾದು ನೋಡಿ ಎಂದು ತಿಳಿಸಿದರು.

See also  ಸ್ಮಾರ್ಟ್‌ ಸಿಟಿ ಮೂಲಕ ಅಭಿವೃದ್ಧಿ ಪರ್ವ, ಕೇಂದ್ರ ಸಚಿವ ಪಿಯೂಷ್‌ ಗೋಯಲ್‌
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು