News Karnataka Kannada
Friday, April 26 2024
ಹುಬ್ಬಳ್ಳಿ-ಧಾರವಾಡ

ನನ್ನ ಸೋಲಿಸಲು ಹೋಗಿ ರಾಜ್ಯದಲ್ಲಿ ಬಿಜೆಪಿ ಸೋತಿದೆ : ಜಗದೀಶ್ ಶೆಟ್ಟರ್

I don't know why shettar didn't have a ticket: Jagadish Shettar
Photo Credit : News Kannada

ಹುಬ್ಬಳ್ಳಿ: ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದಿಂದ ಬರುತ್ತೆ ಅಂದಿದ್ದೆ. ಕಾಂಗ್ರೆಸ್‌ಗೆ ಬೆಂಬಲ ನೀಡಿದ ಕರ್ನಾಟಕ ಜನರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ನನಗೆ ಗೆಲ್ಲಲು ಆಗಿಲ್ಲ, ಜನರ ತೀರ್ಪಿಗೆ ಗೌರವ ಕೊಡುತ್ತೇನೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನನ್ನನ್ನು ಸೋಲಿಸಬೇಕು ಅಂತಾ ಹಠ ಮಾಡಿದ್ದವರು ಹಠ ಸಾಧಿಸಿದ್ದಾರೆ. ನನ್ನನ್ನು ಸೋಲಿಸಲು ಹೋಗಿದ್ದ ವ್ಯಕ್ತಿಗಳು ರಾಜ್ಯದಲ್ಲಿ ಬಿಜೆಪಿಯನ್ನು ಸೋಲಿಸಿದ್ದಾರೆ. ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದವರ ವಿರುದ್ಧ ಚಾಲೆಂಜ್ ಮಾಡಿ ಫೇಸ್ ಮಾಡಿದ್ದೇನೆ. ನಾನು ಸೋತಿದ್ದೇನೆ ಅನ್ನೋ ದುಃಖ ನನಗಿಲ್ಲ ಎಂದರು.

ಲಿಂಗಾಯತ ಸಮುದಾಯ ಕಡೆಗಣಿಸಿದ್ರು ಅನ್ನೋದರ ಪರಿಣಾಮ ಈಗ ಕಿತ್ತೂರು, ಕಲ್ಯಾಣ ಕರ್ನಾಟಕದಲ್ಲಿ ಕಾಣಿಸುತ್ತಿದೆ. ಒಬ್ಬರಿಗೆ ಪೆಟ್ಟು ಕೊಡಲು ಹೋಗಿ ಇಡೀ ಬಿಜೆಪಿಗೆ ಪೆಟ್ಟು ಕೊಟ್ಟಿದ್ದಾರೆ. ರಾಜಕೀಯದಲ್ಲಿ ಕ್ರಿಯಾಶೀಲವಾಗಿದ್ದು ಕಾಂಗ್ರೆಸ್ ಪರವಾಗಿ ಕೆಲಸ ಮಾಡುತ್ತೇನೆ. 70 ವರ್ಷವಾದ ಮೇಲೆ ನಾನು ಚುನಾವಣಾ ರಾಜಕೀಯದಲ್ಲಿ ಇರಲ್ಲ. ನನಗೀಗ 67 ವರ್ಷ ಮುಂದೆ ಏನಾಗುತ್ತೆ ನೋಡೋಣ ಎಂದರು.

ಬಿಜೆಪಿ ದಕ್ಷಿಣ ಭಾರತದಲ್ಲಿ ಹೇಗೆ ಅವಸಾನ ಆಗುತ್ತಿದೆ ಅಂತಾ ಗೊತ್ತಾಗುತ್ತಿದೆ. ನಾನೇ ಬೆಳೆಸಿದ್ದ ಬಿಜೆಪಿ ಮೈಂಡ್‌ಸೆಟ್ ಚೇಂಜ್ ಮಾಡಲು ಆಗಿಲ್ಲ. ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದಲ್ಲಿ ನಮ್ಮ ಒಳಹೊಡೆತ ಕೆಲಸ ಆಗಿಲ್ಲ. ಏನಾಯ್ತು ಅಂತಾ ಬೂತ್ ವೈಸ್ ಪರಿಶೀಲನೆ ಮಾಡುತ್ತೇನೆ. ಕೆಲವೇ ವ್ಯಕ್ತಿಗಳ ಕುತಂತ್ರದಿಂದ ಇದೆಲ್ಲಾ ಆಗುತ್ತಿದೆ.

ಮುಂದೆ ಲೋಕಸಭಾ ಚುನಾವಣೆ ಬರುತ್ತಿದೆ, ಇದರ ಪರಿಣಾಮ ದೇಶಾದ್ಯಂತ ಆಗುತ್ತೆ. ಲಿಂಗಾಯತ ಬೆಲ್ಟ್ ಮೇಲೆ ಇಂಪ್ಯಾಕ್ಟ್ ಆಗಿದ್ದು, ಲಿಂಗಾಯತರು ಕಾಂಗ್ರೆಸ್ ಪರ ನಿಂತಿದ್ದು ಗೆಲುವಿಗೆ ಒಂದು ಕಾರಣ. ಹುಬ್ಬಳ್ಳಿಯಲ್ಲಿ ಬಿಜೆಪಿ ಒತ್ತಡ ತಂತ್ರ ಹೇರಿ, ಭಯದ ವಾತಾವರಣ ಹೇರಿದ್ದರು. ಹಣ ಹಂಚಿ ಚುನಾವಣೆಯಲ್ಲಿ ಗೆದ್ದಿದ್ದಾರೆ. ಅಧಿಕಾರದ ದುರುಪಯೋಗ, ದೌರ್ಜನ್ಯವಾಗಿದೆ. ಮೋದಿ ನಾಯಕತ್ವ, ಬಿಜೆಪಿ ಸರ್ಕಾರವಿದ್ದಾಗಲೂ 65ಕ್ಕೆ ಬಂದು ನಿಂತಿದ್ದಾರೆ.

ನಾನೆಂದೂ ಸೇಡಿನ ರಾಜಕೀಯ ಮಾಡಿಲ್ಲ. ಬಿಜೆಪಿಯ ಅಹಂಕಾರ, ಹಣದ ಮದಕ್ಕೆ ಉತ್ತರ ಕೊಟ್ಟಿದ್ದೇನೆ. ನನಗೆ ಲಾಭವಾಗಿಲ್ಲ, ಆದರೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿಲ್ಲ. ಲೋಕಸಭಾ ಚುನಾವಣೆಯ ಬಗ್ಗೆ ಕಾಂಗ್ರೆಸ್ ಪಕ್ಷದ ನಾಯಕರ ಜೊತೆ ಕುಳಿತು ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು