News Karnataka Kannada
Saturday, April 20 2024
Cricket
ಹುಬ್ಬಳ್ಳಿ-ಧಾರವಾಡ

ಶೆಟ್ಟರ್ ಜೊತೆ ಕಾಂಗ್ರೆಸ್ ಪಕ್ಷ ಇದೆ, ನಾವು ಇರುತ್ತೇವೆ- ಡಿ.ಕೆ. ಶಿವಕುಮಾರ್ ಭರವಸೆ

Congress party is with Shettar, we will be there: DK Shivakumar Shivakumar assures
Photo Credit : News Kannada

ಹುಬ್ಬಳ್ಳಿ: ದೇವರು ವರವನ್ನು ಕೊಡುವುದಿಲ್ಲ ಶಾಪವನ್ನು ಕೊಡುವುದಿಲ್ಲ, ಅವಕಾಶ ಮಾತ್ರ ಕೊಡುತ್ತಾನೆ. ನಾವು ಅದನ್ನು ಉಪಯೋಗಿಸಿಕೊಳ್ಳಬೇಕು. ನಾವು ಪ್ರತಿಯೊಂದು ಹಂತದಲ್ಲೂ ಬಿಜೆಪಿ ಸರ್ಕಾರದ ತಪ್ಪು ಮುಂದಿಟ್ಟಿದ್ದೇವೆ. ಈ ನಿಟ್ಟಿನಲ್ಲಿ ಇವತ್ತು ನಮಗೆ ದೊಡ್ಡ ಅವಕಾಶ ಸಿಕ್ಕಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಮಾಜಿ ಸಿಎಂ ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ಬಳಿದ ಮಾಧ್ಯಮವರ ಜೊತೆ ಮಾತನಾಡಿದ ಅವರು , ಶೆಟ್ಟರ್ ಜೊತೆ ನಾವು ಇರ್ತೀವಿ,ನಮಗೆ ವರಿಷ್ಠರ ಆದೇಶ ಇದೆ. ರಾಷ್ಟ್ರೀಯ ಅಧ್ಯಕ್ಷರ ಆದೇಶದ ಮೇಲೆ ಕೆಲ ಸಂದೇಶ ಹೇಳಬೇಕಿತ್ತು. ಶೆಟ್ಟರ್ ಗೆ ಸಂದೇಶ ತಲುಪಿಸಿದ್ದೇನೆ .ಕಾಂಗ್ರೆಸ್ ಪಕ್ಷ ಅವರ ಜೊತೆ ಇದೆ . ಶೆಟ್ಟರ್ ಗೆ ಸ್ಥಾನ ಮಾನ ಕೊಡುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಾನು ಒಂದೇ ಮಾತಿನಲ್ಲಿ ಹೇಳುತ್ತೇನೆ. ಪಕ್ಷ ಅವರ ಜೊತೆ ಇದೆ. ನಾವೇನು ಗೌಪ್ಯವಾಗಿ ಇಡುವುದಿಲ್ಲ ಎಲ್ಲವನ್ನೂ ನಿಮಗೆ ಹೇಳುತ್ತೇವೆ ಎಂದರು.

ಅವಳಿ ನಗರದ ಮಾಧ್ಯಮದ ಮಿತ್ರರಿಗೆ ಅಭಿನಂದನೆ ಸಲ್ಲಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್
ಹುಬ್ಬಳ್ಳಿ-ಧಾರವಾಡ ಮಾಧ್ಯಮದ ಮಿತ್ರರಿಗೆ ಅಭಿನಂದನೆಗಳು. ಸಮಾಜಕ್ಕೆ ಸತ್ಯ ಸಂಗತಿ, ಎಲ್ಲ ವರ್ಗದ ಜನರನ್ನು ರಕ್ಷಣೆ ನೀವು ಮಾಡಿದ್ದೀರಿ. ನಾನು ಜಗದೀಶ್ ಶೆಟ್ಟರ್, ಸವದಿ ಭೇಟಿ ಕಾರ್ಯಕ್ರಮ ಮಾತ್ರ ಹಾಕಿಕೊಂಡಿದ್ದೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಮಾಜಿ ಸಿಎಂ ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಬಿ ಫಾರಂ ಕೊಟ್ಟ ಮೇಲೆ ಜಗದೀಶ್ ಶೆಟ್ಟರ್ ಜೊತೆ ಮಾತಾಡಿರಲಿಲ್ಲ. ನಾನು ಪ್ರಚಾರದಲ್ಲಿ ಬ್ಯೂಸಿ ಆಗಿದ್ದೆ. ಶೆಟ್ಟರ್, ಸವದಿ, ಗುಬ್ಬಿ ಶ್ರೀನಿವಾಸ ಅವರಿಂದ ನಮಗೆ ಶಕ್ತಿ ಬಂದಿದೆ .ಸೋಲು ಗೆಲವು ಇರುತ್ತದೆ. ಅವರು ನಮಗೆ ಮಾರ್ಗದರ್ಶನ ಕೊಟ್ಟಿದ್ದಾರೆ. ಅವರಿಂದ ಬದಲಾಗಣೆ ಆಯ್ತು.ಇಡೀ ರಾಜ್ಯದಲ್ಲಿ ಬದಲಾವಣೆ ಆಯ್ತು. ಸೋಲು ಗೆಲವು ಚುನಾವಣೆಯಲ್ಲಿ ಸಾಮಾನ್ಯ. ಶೆಟ್ಟರ್, ಸವದಿ ಹಾಗೂ ಗುಬ್ಬಿ ಶ್ರೀನಿವಾಸ ಅವರಿಂದ ನಮಗೆ ಮಾರ್ಗದರ್ಶನ ಕೊಟ್ಟಿದ್ದಾರೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು