News Karnataka Kannada
Thursday, March 28 2024
Cricket
ಹುಬ್ಬಳ್ಳಿ-ಧಾರವಾಡ

ಧಾರವಾಡ: ಕಾಂಗ್ರೆಸ್ ಮುಳುಗುತ್ತಿರೋ ಹಡಗು- ಮಾಜಿ ಸಿಎಂ ಯಡಿಯೂರಪ್ಪ

Dharwad: Congress should drive away a sinking ship without address: Yediyurappa
Photo Credit : News Kannada

ಧಾರವಾಡ: ಕಾಂಗ್ರೆಸ್ ಮುಳುಗುತ್ತಿರೋ ಹಡಗು ಇದ್ದಂತೆ.  ಜಗತ್ತಿನ ವಿಶ್ವನಾಯಕರ ಪೈಕಿ ಶ್ರೇಷ್ಠ ಸ್ಥಾನ ಗಳಿಸಿರುವ ಪ್ರಧಾನಿ ಮೋದಿಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸಮಾನರಾಗಲು ಸಾಧ್ಯವೇ ಇಲ್ಲ ಎಂದು ಮಾಜಿ‌ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.

ಬಿಜೆಪಿ ಅಭ್ಯರ್ಥಿ ಅಮೃತ್ ದೇಸಾಯಿ ಪರ ಧಾರವಾಡ ತಾಲೂಕಿನ ಉಪ್ಪಿನಬೆಟಗೇರಿಯಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು,ತುಪ್ಪರಿ ಹಳ್ಳ ಮಳೆ ಬಂದಾಗ ಸಾಕಷ್ಟು ಅನಾಹುತ ಆಗುತ್ತಿತ್ತು.312 ಕೋಟಿ ನೀಡಿ ಅದಕ್ಕೆ ಪರಿಹಾರ ಕಂಡುಕೊಂಡಿದ್ದೇವೆ. ಕಾಂಗ್ರೆಸ್ ಪಕ್ಷ ದೇಶದಲ್ಲಿ ಎಲ್ಲಿದೆ. ಎಲ್ಲಾ ರಾಜ್ಯದಲ್ಲಿ ನೀವು ಸೋತಿದ್ದಾರೆ. ಚುನಾವಣೆ ನಂತರ ಕಾಂಗ್ರೆಸ್ ದಿವಾಳಿಯಾಗಲಿದೆ. ರೈತರಿಗೆ ಉಚಿತ ವಿದ್ಯುತ್ ನೀಡಿದ್ದು ನಾವು. ರೈತರಿಗಾಗಿ ಪ್ರತ್ಯೇಕ ಬಜೆಟ್ ಮಂಡನೆ ಮಾಡಿದ್ದೇನೆ. ಪ್ರಧಾನಿ ಮೋದಿ ಬಗ್ಗೆ ಅಲ್ಲೊಬ್ಬ ಇಲ್ಲೊಬ್ಬ ಹಗುರವಾಗಿ ಮಾತನಾಡುತ್ತಾರೆ. ಖರ್ಗೆಯವರು ಮೋದಿಜಿ ಬಗ್ಗೆ ಹಗುರವಾಗಿ ಮಾತನಾಡುತ್ತಾರೆ. ರಾಷ್ಟ್ರೀಯ ಅಧ್ಯಕ್ಷ ಈ ರೀತಿ ಕೆಳಮಟ್ಟದ ಮಾತು ಹೇಳಿದ್ದಾರೆ.

ಕಾಂಗ್ರೆಸ್ ನವರು ಹಗುರವಾಗಿ ಮಾತನಾಡುತ್ತಿದ್ದಾರೆ.ಕಾಂಗ್ರೆಸ್ ಗೆ ಅಡ್ರೆಸ್ ಇಲ್ಲದ ಹಾಗೆ ಓಡಿಸಬೇಕು. ಕೌನ್ಟಿಂಗ್ ಏಜೆಂಟ ಗಳು ಅಲ್ಲಿಂದಲೇ ಓಡಬೇಕು ಹಾಗೆ ಮತ ಹಾಕಿ. ಸೂರ್ಯ ಚಂದ್ರ ಇರೋದು ಎಷ್ಟು ಸತ್ಯವೋ. 130ರಿಂದ140 ಸೀಟ್ ಗಳನ್ನ ಗೆದ್ದು ಸರ್ಕಾರ ರಚನೆ ಮಾಡ್ತೀವಿ. ನನಗೆ 80 ವರ್ಷ, ಆದ್ರೆ ನಾನು ಮನೆಯಲ್ಲಿ ಕುಳಿತಿಲ್ಲ. ಸರ್ಕಾರ ಬರುವ ಹಾಗೆ ಕೆಲಸ ಮಾಡ್ತೀನಿ. ಕಾಂಗ್ರೆಸ್ ಹಣ ಬಲ ತೋಳು ಬಲ, ಹೆಂಡದ ಬಲ ತೋರಿಸಿ ಜನರನ್ನ ಮೋಸ ಮಾಡಿದ್ದರು. ಆದ್ರೆ ಇನ್ನು ಮುಂದೆ ಆಗಲ್ಲ. ಅಮೃತ್ ದೇಸಾಯಿ ಗೆಲ್ಲಿಸಿ ಮತ್ತೊಮ್ಮೆ ನಾನು ಇಲ್ಲಿಗೆ ಬರ್ತೀನಿ ಎಂದರು. 25ಸಾವಿರಕ್ಕೂ ಅಧಿಕ ಮತಗಳಿಂದ ಅಮೃತ್‌ ಗೆಲ್ಲುತ್ತಾರೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು