ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ಸೆನೆಟ್ ಸಭಾಂಗಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ನೇತೃತ್ವದಲ್ಲಿ ಕೇಂದ್ರ ಮತ್ತು ರಾಜ್ಯಸರ್ಕಾರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ತಿಳಿಸಿ, ಭಾರತೀಯ ಜನತಾ ಪಕ್ಷಕ್ಕೆ ಬೆಂಬಲಿಸಿ, ಆಶೀರ್ವಾದ ಮಾಡುವಂತೆ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳೊಡನೆ ಮತಯಾಚನೆ ಮಾಡಲಾಯಿತು.
ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾದ ಶಾಸಕ ಅರವಿಂದ ಬೆಲ್ಲದ ಕಾರ್ಯವೈಖರಿ ಬಗ್ಗೆ ಕೇಂದ್ರ ಸಚಿವರಾದ ಜೋಶಿಯವರು ತಿಳಿಹೇಳಿದ್ದು, ವಿನೂತನ ರೀತಿಯಲ್ಲಿ ಮತಯಾಚನೆ ಮಾಡಿದರು. ಇನ್ನೂ ಈ ಸಂದರ್ಭದಲ್ಲಿ ಬಿಜೆಪಿ ಮಹಾನಗರ ಜಿಲ್ಲಾ ಅಧ್ಯಕ್ಷರಾದ ಸಂಜಯ ಕಪಟಕರ,ಮಾಜಿ ಮಹಾಪೌರರಾದ ಶಿವು ಹಿರೇಮಠ, ವಿಶ್ವವಿದ್ಯಾಲಯದ ಮಾಜಿ ಸಿಂಡಿಕೇಟ್ ಸದಸ್ಯರಾದ ಕಶ್ ಹಾವೇರಿಪೆಟ್, ಹಂಸವೇಣಿ ಎನ್ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.