ಧಾರವಾಡ: ವಿನಾಯಕ ಕುಲಕರ್ಣಿ ಉತ್ತರ ಕರ್ನಾಟಕ ಲಿಂಗಾಯತ ಪ್ರಭಾವಿ ನಾಯಕರಾಗಿದ್ದಾರೆ.ಈ ಹಿಂದೆ ಸಚಿವರಾಗಿ ವಿನಯ ಅನುಭವ ಹೊಂದಿದ್ದಾರೆ. ನೂತನ ಶಾಸಕ ವಿನಯ ಕುಲಕರ್ಣಿಯವರಿಗೆ ಡಿಸಿಎಂ ಸ್ಥಾನ ನೀಡಬೇಕು ಎಂದು ಮುರುಘಾಮಠದ ಮಲ್ಲಿಕಾರ್ಜುನ್ ಸ್ವಾಮಿ ಹೇಳಿದರು.
ನಗರದ ಮುರುಘಾಮಠದಲ್ಲಿ ಸುದ್ದಿಗೋಷ್ಠಿ ನಡೆಸಿ ಶ್ರೀ ಮಲಿಕಾರ್ಜುನ್ ಸ್ವಾಮಿಗಳು ಮಾತನಾಡಿ, ಧಾರವಾಡ ಗ್ರಾಮೀಣ ಕ್ಷೇತ್ರದ ಮತದಾರರು ಅವರಿಗೆ ಆರ್ಶೀವಾದ ಮಾಡಿದ್ದಾರೆ. ಈ ಬಾರಿ ಕಾಂಗ್ರೆಸ್ ಸರ್ಕಾರಕ್ಕೆ ಸ್ಪಷ್ಟ ಬಹುಮತ ಬಂದಿದೆ. ವಿನಾಯಕ ಕುಲಕರ್ಣಿಯವರಿಗೆ ಡಿಸಿಎಂ ಸ್ಥಾನ ನೀಡಬೇಕು ಅನ್ನುವುದು ನಮ್ಮ ಅಪೇಕ್ಷೆ ಎಂದರು.