ಹುಬ್ಬಳ್ಳಿ: ಉಪ ಮುಖ್ಯಮಂತ್ರಿ ಶಿವಕುಮಾರ ಅವರ ಜೊತೆ ಔಪಚಾರಿಕವಾದ ಮಾತುಕತೆಯಾಗಿದೆ. ಉತ್ತರ ಕರ್ನಾಟಕ ಭಾಗದ ಸಂಘಟನೆ ಬಗ್ಗೆ ಡಿಕೆಶಿ ಸಂತಸ ವ್ಯಕ್ತಪಡಿಸಿದರು.
ಮುಂಬರುವ ಚುನಾವಣೆ ಕುರಿತು ಚರ್ಚೆ ಮಾಡಿದ್ದೇವೆ. ಪಕ್ಷವನ್ನ ಇನ್ನೂ ಹೆಚ್ಚಿನ ರೀತಿಯಲ್ಲಿ ಬಲಪಡಿಸುವ ನಿಟ್ಟಿನಲ್ಲಿ ಚರ್ಚೆ ಮಾಡಿದ್ದೇವೆಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.
ನಗರದಲ್ಲಿ ತಮ್ಮ ನಿವಾಸದಲ್ಲಿ ಡಿಸಿಎಂ ಡಿಕೆಶಿ ಭೇಟಿ ಮಾಡಿದ ನಂತರ ಮಾತನಾಡಿದ ಅವರು, ಸೌಹಾರ್ದತೆಯಿಂದ ನಾವು ಚರ್ಚೆ ಮಾಡಿದ್ದೇವೆ. ಚುನಾವಣಾ ತಯಾರಿ ಬಗ್ಗೆ ಕೆಲ ಮಾತುಕತೆ ನಡೆಸಿದ್ದೇವೆ. ಅವರೂ ಸಹ ಕೆಲವು ಸಲಹೆ ಸೂಚನೆಗಳನ್ನ ನೀಡಿದ್ದಾರೆ.
ಪಕ್ಷ ನನ್ನ ಜೊತೆಗಿದೆ ಅನ್ನೋ ಭರವಸೆಯನ್ನ ನೀಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ನಾನು ಅಭ್ಯರ್ಥಿ ಅನ್ನುವ ಬಗ್ಗೆ ಯಾವುದೂ ಚರ್ಚೆ ಮಾಡಿಲ್ಲ.ಪಕ್ಷ ಸಂಘಟನೆ ಹಾಗೂ ಚುನಾವಣಾ ತಯಾರಿ ಬಗ್ಗೆ ಹಲವು ಚರ್ಚೆ ನಡೆಸಲಾಯಿತು ಎಂದರು.