ನವಲಗುಂದ: ವಿಧಾನಸಭಾ ಚುನಾವಣಾ ಸೋಲಿನಿಂದ ಧೃತಿಗೆಡ ಬೇಕಾಗಿಲ್ಲ. ಮುಂಬರುವ ಚುನಾವಣೆಗಳಿಗಾಗಿ ಸಂಘಟನಾ ಬಲ ನಿರ್ಮಾಣ ಮಾಡೋಣ ಎಂದು ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ಹೇಳಿದರು.
ಅವರು ಪಟ್ಟಣದ ಗವಿಮಠ ದಾಸೋಹ ಭವನದಲ್ಲಿ ಆಯೋಜಿಸಿದ್ದ ಬಾರತೀಯ ಜನತಾ ಪಾರ್ಟಿಯ ಆತ್ಮಾವಲೋಕನ ಸಭೆಯಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡುತ್ತ ಕೆಲ ಅವೈಜ್ಞಾನಿಕ ನಿರ್ಧಾರಗಳಿಂದ ಸೋಲಾಗಿದೆತೇ ಹೊರತು, ಬೇರೆ ಕಾರಣದಿಂದ ಅಲ್ಲ. ವಿಚಲಿತರಾಗದೆ ಆತ್ಮವಿಶ್ವಾಸದಿಂದ ಪಕ್ಷ ಸಂಘಟನೆಯಲ್ಲಿ ತೋಡಗಿಕೊಳ್ಳೋಣ ಎಂದು ಕಾರ್ಯಕರ್ತರಲ್ಲಿ ಆತ್ಮವಿಶ್ವಾಸ ತುಂಬಿದರು. ಭಾರತೀಯ ಜನತಾ ಪಾರ್ಟಿ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಇದ್ದರು