ಹುಬ್ಬಳ್ಳಿ : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆಲ್ತಾರೆ ಅಂತ ರಕ್ತದಲ್ಲಿ ಪೋಸ್ಟರ್ ಬರೆದಿದ್ದ ಯುವಕ ನೈತಿಕ ಹೊಣೆ ಹೊತ್ತು ರಾಜೀನಾಮೆ ಸಲ್ಲಿಸಿದ್ದಾನೆ. ಮಂಜುನಾಥ ಎಂಬ ಯುವಕ ಜಗದೀಶ್ ಶೆಟ್ಟರ್ ಈ ಬಾರಿ ಗೆದ್ದೇ ಗೆಲ್ತಾರೆಂದು ರಕ್ತದಲ್ಲಿ ಪತ್ರ ಬರೆದಿದ್ದ. ಸಧ್ಯ ಶೆಟ್ಟರ್ ಸೋಲಿನಿಂದಾಗಿ ಮಂಜುನಾಥ ಧಾರವಾಡ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾನೆ.
ಈ ಸಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತದೆ. ಜಗದೀಶ್ ಶೆಟ್ಟರ್ ಗೆದ್ದೇ ಗೆಲ್ತಾರೆ ಅಂತ ರಕ್ತದಲ್ಲಿ ಬರೆದಿದ್ದ ಮಂಜುನಾಥ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಿದ್ದು ಮನಸ್ಸಿಗೆ ಬಹಳ ಖುಷಿಯಾಗಿದೆ. ಜನರ ತೀರ್ಪನ್ನು ಸ್ವಾಗತಿಸುತ್ತೇನೆ ಎಂದಿದ್ದಾನೆ.
ಆದರೆ ಮಾಜಿ ಮುಖ್ಯಮಂತ್ರಿಗಳು ಜಗದೀಶ್ ಶೆಟ್ಟರ್ ಮತ್ತು ಕುಂದಗೋಳ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಸೋತಿದ್ದಾರೆ. ಈ ಸೋಲಿನ ನೈತಿಕ ಹೊಣೆ ಹೊತ್ತು ನಾನು ರಾಜೀನಾಮೆ ಕೊಡುತ್ತಿದ್ದೇನೆ. ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳೇನೆ ಎಂದು ಪತ್ರದಲ್ಲಿ ಬರೆದಿದ್ದಾನೆ.