ಹುಬ್ಬಳ್ಳಿ: ಯಡಿಯೂರಪ್ಪ ಅವರು ಅಧಿಕಾರದಿಂದ ನಿರ್ಗಮಿಸಿದ ನಂತರ ನಾನು ಹಿಂದೆ ಯಡಿಯೂರಪ್ಪ ಕಣ್ಣೀರನಲ್ಲಿ ಬಿಜೆಪಿ ಸರ್ಕಾರಕೊಚ್ಚಿ ಹೋಗತ್ತದೆ ಎಂದು ಹೇಳಿದ್ದೆ. ಇವತ್ತು ಆ ಪಕ್ಷದ ನಾಯಕರಿಗೆ ಇದು ಅರಿವಾಗಿದೆ. ಅಧಿಕಾರ ಬಂದ ಸಂದರ್ಭದಲ್ಲಿ ಆ ಪಕ್ಷದ ನಾಯಕರನ್ನು ನಿರ್ಲಕ್ಷ್ಯ ಮಾಡಿದರೆ ತಿನ್ನಬಾರದ ಪೆಟ್ಟು ತಿಂತಾರೆ . ರಾಜ್ಯದ ಹಿರಿಯ ನಾಯಕರನ್ನು ಕಡೆಗಣಿಸಿದ್ದೆ ಬಿಜೆಪಿ ಇಂದಿನ ಸ್ಥಿತಿಗೆ ಕಾರಣ. ಯ ಡಿಯೂರಪ್ಪ, ಸವದಿ, ಶೆಟ್ಟರ್, ಈಶ್ವರಪ್ಪ ಕಡೆಗಣಸಿರೋದೆ ಇದಕ್ಕೆಲ್ಲ ಕಾರಣ ಎಂದು ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ನಾನು ಅವತ್ತು ಒಬ್ಬ ವ್ಯಕ್ತಿ ಉದ್ದೇಶಿಸಿ ಮಾತಾಡಿರಲಿಲ್ಲ. ಯಡಿಯೂರಪ್ಪ ಎಲ್ಲರಿಗೆ ಬೇಕಾದ ನಾಯಕರು. ಅವತ್ತು ಎಲ್ಲ ಸಮಾಜದ ನಾಯಕರು ಯಡಿಯೂರಪ್ಪ ಅವ ರನ್ನು ಮುಂದುವರೆಸಿಬೇಕು ಎಂದಿದ್ದರು. ಯಾವದೋ ಕೆಟ್ಟ ಉದ್ದೇಶ,ಅಥವಾ ಸ್ವಾರ್ಥಕ್ಕೆ ತಗೆದುಕೊಂಡ ನಿರ್ಣಯ ಇಂದಿನ ಹೀನಾಯ ಪರಿಸ್ಥಿತಿಗೆ ಕಾರಣ.ಯಡಿಯೂರಪ್ಪ ಅವರನ್ನು ಬದಲಾಯಿಸಿದ್ದು ಈ ಪರಿಸ್ಥಿತಿಗೆ ಕಾರಣ ಎಂದರು.