News Karnataka Kannada
Friday, April 26 2024
ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿಯಲ್ಲಿ ಜಗದೀಶ್ ಶೆಟ್ಟರ್ ಭರ್ಜರಿ ಪ್ರಚಾರ

Jagadish Shettar campaigns in Hubballi
Photo Credit : News Kannada

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದಿಂದ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು, ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ನಡೆಸಿದ್ದಾರೆ.

ಕಾರವಾರ ರೋಡ್ ನಲ್ಲಿರುವ ಮೇಯರ್ ಮೆಮೋರಿಯಲ್ ಚರ್ಚ್ ಮಿಶನ್ ಕಾಂಪೌಂಡ್‌ನಲ್ಲಿ, ಫಾಸ್ಟರ್ ಕಮಿಟಿ ಹಾಗೂ ಪದಾದಿಕಾರಿಗಳ ವತಿಯಿಂದ ಕ್ರಿಶ್ಚಿಯನ್ ಬಾಂಧವರು ಸಭೆಯನ್ನು ಹಮ್ಮಿಕೊಂಡು ಜಗದೀಶ್ ಶೆಟ್ಟರ್ ಅವರಿಗೆ ಸನ್ಮಾನ ಮಾಡಿ ಗೌರವ ಸಲ್ಲಿಸಿದರು.

ಇನ್ನು ಕ್ರಿಶ್ಚಿಯನ್ ಧರ್ಮಗುರುಗಳಾದ ರೇವರೆಂಡ್ ರಾಜು, ಮತ್ತು ಅನಿಲ್ ಬುನಿಯನ್, ಉಜ್ವಲ ಗುಂಡಮಿ, ಎಡ್ವರ್ಡ್ ಬಳ್ಳಾರಿ ಹೀಗೆ ಕ್ರಿಶ್ಚಿಯನ್ ಧರ್ಮದ ಮುಖಂಡರು ಸೇರಿಕೊಂಡು ಪ್ರಾರ್ಥನೆ ಮಾಡಿ ಜಗದೀಶ್ ಶೆಟ್ಟರ್ ಅವರಿಗೆ ಅಭಿನಂದನೆ ಸಲ್ಲಿಸಿದರು. ಈ ಸಭೆಯಲ್ಲಿ ನೂರಾರು ಕ್ರಿಶ್ಚಿಯನ್ ಬಾಂಧವರು ಭಾಗವಹಿಸಿದ್ದು, ಇವರೆಲ್ಲರನ್ನು ಉದ್ದೇಶಿಸಿ ಜಗದೀಶ್ ಶೆಟ್ಟರ್ ಅವರು ಮಾತನಾಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು