News Karnataka Kannada
Saturday, April 20 2024
Cricket
ಹುಬ್ಬಳ್ಳಿ-ಧಾರವಾಡ

ಇದು ನನ್ನ ಗೆಲುವಲ್ಲ, ನನ್ನ ಕಾರ್ಯಕರ್ತರ, ಮತದಾರರ ಗೆಲುವು : ಅರವಿಂದ ಬೆಲ್ಲದ

Aravind Bellada
Photo Credit : News Kannada

ಧಾರವಾಡ: ನಮ್ಮ ಪಕ್ಷ ಜಾರಿಗೆ ತಂದ ಕೆಲವೊಂದಿಷ್ಟು ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ನಾವು ಎಡವಿದ್ದೇವೆ ಎಂದೆನಿಸುತ್ತಿದೆ. ಇದನ್ನು ನಮ್ಮ ಪಕ್ಷದ ವಲಯದಲ್ಲಿ ಕುಳಿತು ಗಂಭೀರವಾಗಿ ಚರ್ಚೆ ಮಾಡಬೇಕಿದೆ. ಕಾಂಗ್ರೆಸ್ ನೀಡಿದ ಗ್ಯಾರಂಟಿ ಕಾರ್ಡ್‌ಗಳು ಜನರ ದಾರಿ ತಪ್ಪಿಸಿವೆ. ನೋಡೋಣ… ಅವರು ಎಷ್ಟರ ಮಟ್ಟಿಗೆ ಗ್ಯಾರಂಟಿಗಳನ್ನು ಈಡೇರಿಸುತ್ತಾರೋ ಕಾದು ನೋಡೋಣ ಎಂದು ಅರವಿಂದ ಬೆಲ್ಲದ ಹೇಳಿದರು.

ತಮ್ಮ ಗೆಲುವಿನ ಬಳಿಕ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ ಅವರು, ಹುಬ್ಬಳ್ಳಿ- ಧಾರವಾಡ ಪಶ್ಚಿಮ ಕ್ಷೇತ್ರದಲ್ಲಿ ಹಲವಾರು ವರ್ಷಗಳಿಂದ ಸರಳ ಮತ್ತು ಸಜ್ಜನಿಕೆಯಿಂದ ಕೆಲಸ ಮಾಡಿಕೊಂಡು ಬಂದಿದ್ದೇವೆ. ನಮ್ಮ ಬಿಜೆಪಿ ಸರ್ಕಾರ ನೀಡಿದ ಯೋಜನೆಗಳನ್ನು ಜನರಿಗೆ ತಲುಪಿಸಿದ್ದೇನೆ. ಈ ಗೆಲುವು ನನ್ನ ಗೆಲುವಲ್ಲ, ನನ್ನ ಕಾರ್ಯಕರ್ತರು ಹಾಗೂ ಮತದಾರರ ಗೆಲುವು ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು