News Karnataka Kannada
Friday, March 29 2024
Cricket
ಹುಬ್ಬಳ್ಳಿ-ಧಾರವಾಡ

ಐದು ಗ್ಯಾರಂಟಿ ಜಾರಿ ಆಗದಿದ್ದರೆ ರಾಜಕೀಯ ಸನ್ಯಾಸತ್ವ ಸ್ವೀಕಾರ ಮಾಡುವೆ : ಕೋನರೆಡ್ಡಿ

Will accept political asceticism if five guarantees are not implemented: Konareddy
Photo Credit : News Kannada

ಹುಬ್ಬಳ್ಳಿ : ನನಗೂ ಸಹ ಮುಖ್ಯ ಮಂತ್ರಿ, ಉಪ ಮುಖ್ಯ ಮಂತ್ರಿ, ಮಂತ್ರಿ ಯಾಗಬೇಕು ಅನ್ನೋ ಆಸೆಯಿದೆ..ಅವಕಾಶ ಸಿಕ್ಕಾಗ ಆಗುತ್ತೇನೆ. ಎಲ್ಲರಿಗೂ ಆಸೆ ಇರುತ್ತೆ. ನನಗೂ ಕೃಷಿ ಸಚಿವನಾಗುವ ಆಸೆಯಿದೆ. ಯುವಕರಿಗೆ ಮತ್ತು ಹೊಸ ಮುಖಗಳಿಗೆ ಅವಕಾಶ ನೀಡಬೇಕು ಅಂದರೆ ನನ್ನನ್ನು ಸಹ ಪರಿಗಣಿಸಿ. ಐದು ಗ್ಯಾರಂಟಿ ಜಾರಿಗೆ ಮಾಡೇ ಮಾಡತ್ವಿ ಸ್ವಲ್ಪ ಕಾಲಾವಕಾಶ ಬೇಕು. ಐದು ಗ್ಯಾರಂಟಿ ಜಾರಿ ಆಗದಿದ್ದರೆ ರಾಜಕೀಯ ಸನ್ಯಾಸತ್ವ ಸ್ವೀಕಾರ ಮಾಡುವೆ ಎಂದು ನವಲಗುಂದ ಶಾಸಕ ಕೋನರೆಡ್ಡಿ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,‌ನನ್ನ ಬಳಿ ಹೊಸ ಡ್ರೆಸ್ ಯಾವಾಗಲೂ ಇರುತ್ತೆ. ನಾನು ರೈತ ಯಾವ ಡ್ರೆಸ್ ಆದ್ರೆನು. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆ ಸಚಿವ ಸ್ಥಾನ ನೀಡಬೇಕು .ಸಚಿವ ಸ್ಥಾನ ಕೊಟ್ಟರೆ ಏನು ತಪ್ಪಿಲ್ಲ ಅವರು ಹಿರಿಯರು ಮತ್ತು ಮಾಜಿ ಸಿಎಂ ಇದ್ದಾರೆ. ಅವರಿಗೆ ಸರಿಸಮಾನವಾಗಿರುವ ಹುದ್ದೆ ನೀಡುವುದು ಸೂಕ್ತ. ಮಹದಾಯಿ ನೀರಿಗಾಗಿ ಬಿಜೆಪಿ ಹೇಳಿರುವ ಮಾಹಿತಿ ಪರಿಶೀಲನೆ ಮಾಡಲಾಗುತ್ತಿದೆ. ಬಿಜೆಪಿ ಎಷ್ಟು ಸುಳ್ಳು ಹೇಳಿದ್ದಾರೆ ಎಷ್ಟು ಸತ್ಯ ಹೇಳಿದ್ದಾರೆ ಅಂತ ಸಮಾಲೋಚನೆ ಮಾಡಲಾಗುತ್ತಿದೆ. ಮಹಾದಾಯಿ ವಿಚಾರವಾಗಿ ಬಿಜೆಪಿ ಯಾವುದೇ ಟೆಂಡರ್ ಕರೆದಿಲ್ಲ.ಕೇವಲ ನೋಟಿಸ್ ತೋರಿಸಲಾಗುತ್ತಿದೆ. ಅರಣ್ಯ ಇಲಾಖೆ ಯಾವುದೇ ಕ್ಲಿಯರೆನ್ಸ್ ನೀಡಿಲ್ಲ.

ಭಜರಂಗದಳ ಬ್ಯಾನ್ ಮಾಡುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಅದರ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ.ನಂದೆನಿದ್ದರು ರೈತರ ಮತ್ತು ಕ್ಷೇತ್ರದ ಅಭಿವೃದ್ಧಿ ಬಗ್ಗೆ ಮಾತ್ರ ಚಿಂತನೆ.

ನನ್ನ ಕ್ಷೇತ್ರದ ಅನುದಾನ ಬಗ್ಗೆ, ರಸ್ತೆಗಳ ಸುಧಾರಣೆ ಬಗ್ಗೆ ಮಾತ್ರ ಆಲೋಚನೆ ಮಾಡುತ್ತಿರುವೆ.ಅದರ ಬಗ್ಗೆ ದೊಡ್ಡ ದೊಡ್ಡವರು ಏನು ಮಾತನಾಡಿದ್ದಾರೆ ಅವರನ್ನಾ ಕೇಳಿ. ನನಗೆ ಅದರ ಬಗ್ಗೆ ಏನು ಗೊತ್ತಿಲ್ಲ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು