News Kannada
Saturday, March 25 2023

ವಿಜಯಪುರ

ವಿಜಯಪುರ: ಮೈಸೂರು ಜಿಲ್ಲಾ ಪತ್ರಕರ್ತರ ಸಂಘಕ್ಕೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ

Mysuru District Journalists' Association conferred with awards
Photo Credit : News Kannada

ವಿಜಯಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 37ನೇ ಸಮ್ಮೇಳನದಲ್ಲಿ ಭಾನುವಾರ ಸಾಂಘಿಕ ಚಟುವಟಿಕೆಗಳ ಮೂಲಕ ಕ್ರಿಯಾಶೀಲವಾಗಿ ಕೆಲಸ ಮಾಡುವ ಜಿಲ್ಲಾ ಸಂಘಕ್ಕೆ ನೀಡುವ ಪ್ರೋತ್ಸಾಹ ಪ್ರಶಸ್ತಿಗೆ ಮೈಸೂರು ಜಿಲ್ಲಾ ಪತ್ರಕರ್ತರ ಸಂಘಕ್ಕೆ ಪ್ರದಾನ ಮಾಡಲಾಯಿತು.

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್‌.ಟಿ. ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಎಂ.ಸುಬ್ರಹ್ಮಣ್ಯ, ಗ್ರಾಮಾಂತರ ಉಪಾಧ್ಯಕ್ಷ ಧರ್ಮಾಪುರ ನಾರಾಯಣ್, ರಾಜ್ಯ ಸಮಿತಿ‌ ಸದಸ್ಯ ಬಿ. ರಾಘವೇಂದ್ರ ಪ್ರಶಸ್ತಿ ಸ್ವೀಕರಿಸಿದರು.

ಇದಲ್ಲದೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಪ್ರತಿ ವರ್ಷ ನೀಡುವ ವಾರ್ಷಿಕ ಪ್ರಶಸ್ತಿಗಳನ್ನು ಮೈಸೂರು ಜಿಲ್ಲೆಯ ಪತ್ರಕರ್ತರು ಸ್ವೀಕರಿಸಿದರು.

ಅತ್ಯುತ್ತಮ ರಾಜಕೀಯ ವಿಮರ್ಶೆಗಾಗಿ ಖಾದ್ರಿ ಶಾಮಣ್ಣ ಪ್ರಶಸ್ತಿ ಮೈಸೂರು ಉದಯವಾಣಿ ಹಿರಿಯ ವರದಿಗಾರ ಕೂಡ್ಲಿ ಗುರುರಾಜ್, ಅತ್ಯುತ್ತಮ ಸ್ಕೂಪ್ ವರದಿಗಾಗಿ ಬಿ.ಎಸ್. ವೆಂಕಟರಾಂ ಪ್ರಶಸ್ತಿಯನ್ನು ಮೈಸೂರು ಕನ್ನಡಪ್ರಭ ಹಿರಿಯ ಉಪಸಂಪಾದಕ ಎಲ್.ಎಸ್.ಶ್ರೀಕಾಂತ್, ಅತ್ಯುತ್ತಮ ಕ್ರೀಡಾ ವರದಿಗಾಗಿ ನೆಟ್ಟಕಲ್ಲಪ್ಪ ಪ್ರಶಸ್ತಿಯನ್ನು ಮೈಸೂರಿನ ವಿಜಯವಾಣಿ ವರದಿಗಾರ ಅವಿನಾಶ್ ಜೈನಹಳ್ಳಿ, ಅತ್ಯುತ್ತಮ ಸುದ್ದಿಚಿತ್ರಕ್ಕಾಗಿ ಬಂಡಾಪುರ ಮುನಿರಾಜು ಪ್ರಶಸ್ತಿಯನ್ನು ಸ್ಟಾರ್ ಆಫ್ ಮೈಸೂರ್ ನ ಛಾಯಾಗ್ರಾಹಕ ಎಂ.ಎನ್.ಲಕ್ಷ್ಮೀನಾರಾಯಣ ಯಾದವ್, ಅರಣ್ಯ ಕುರಿತ ಆರ್.ಎಲ್.ವಾಸುದೇವರಾವ್ ಪ್ರಶಸ್ತಿಯನ್ನು ಹುಣಸೂರಿನ ಎಸ್.ಎಸ್.ಸಚ್ಛಿತ್ ಹಾಗೂ ಪತ್ರಿಕೋದ್ಯಮಕ್ಕೆ ಸಲ್ಲಿಸಿದ ವಿಶೇಷ ಸೇವೆಗಾಗಿ ನೀಡುವ ವಿಶೇಷ ಪ್ರಶಸ್ತಿಯನ್ನು ರಾಜ್ಯಧರ್ಮ ಪತ್ರಿಕೆಯ ಪ್ರದಾನ ಸಂಪಾದಕರಾದ ಮಹಿಮಹೇಶ್ ಅವರು ಸ್ವೀಕರಿಸಿದರು.

See also  ರಾಜಸ್ಥಾನ: ಪಾಕಿಸ್ತಾನದ ಡ್ರೋನ್ ಅನ್ನು ಹೊಡೆದುರುಳಿಸಿದ ಭದ್ರತಾ ಪಡೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು