News Karnataka Kannada
Saturday, April 27 2024
ವಿಜಯಪುರ

ಬಸವನಾಡಿನಲ್ಲಿ ಮತ ಎಣಿಕೆಗೆ ಸಕಲ ಸಿದ್ಧತೆ- ಭೇಟಿ ನೀಡಿ ಪರಿಶೀಲನೆ ನಡೆಸಿದ ಡಿಸಿ

Vijaypur
Photo Credit : News Kannada

ವಿಜಯಪುರ: ವಿಧಾನಸಭಾೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ಮೇ.10ರಂದು ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ಸುಸೂತ್ರವಾಗಿ ಮತದಾನ ನಡೆದಿದ್ದು, ಮತ ಎಣಿಕೆ ಕಾರ್ಯ ಮೇ 13ರಂದು ಶನಿವಾರ ವಿಜಯಪುರ ನಗರದ ಸೈನಿಕ ಶಾಲೆಯಲ್ಲಿ ನಡೆಯಲಿದ್ದು, ಜಿಲ್ಲಾಡಳಿತದಿಂದ ಸಕಲ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ ಬಿ. ದಾನಮ್ಮನವರ ಅವರು ತಿಳಿಸಿದ್ದಾರೆ.

ಒಡೆಯರ ಸದನ
ಈ ಕಟ್ಟಡದಲ್ಲಿ ಮುದ್ದೇಬಿಹಾಳ ಮತ್ತು ದೇವರ ಹಿಪ್ಪರಗಿ ಮತಕ್ಷೇತ್ರಗಳ ಮತ ಎಣಕಿ ನಡೆಯಲಿದೆ.
ಆದಿಲ್ ಶಾಹಿ ಸದನ
ಈ ಕಟ್ಟಡದಲ್ಲಿ ಬಸವನ ಬಾಗೇವಾಡಿ ಮತ್ತು ಬಬಲೇಶ್ವರ ಮತಕ್ಷೇತ್ರಗಳ ಮತ ಎಣಕಿ ನಡೆಯಲಿದೆ.
ಹೊಯ್ಸಳ ಸದನ
ಈ ಕಟ್ಟಡದಲ್ಲಿ ಬಿಜಾಪುರ ನಗರ ಮತ್ತು ನಾಗಠಾಣ(ಮೀ) ಮತಕ್ಷೇತ್ರಗಳ ಮತ ಎಣಿಕೆ ನಡೆಯಲಿದೆ.
ವಿಜಯ ನಗರ ಸದನ
ಈ ಕಟ್ಟಕಟ್ಟಡದಲ್ಲಿ ಇಂಡಿ ಮತ್ತು ಸಿಂದಗಿ ಮತಕ್ಷೇತ್ರಗಳ ಮತ ಎಣಿಕೆ ನಡೆಯಲಿದೆ.

ಮೇ 13 ರಂದು ಶನಿವಾರ ಬೆಳಿಗ್ಗೆ 7.30ಕ್ಕೆ ಆಯಾ ಚುನಾವಣಾಧಿಕಾರಿಗಳು ಹಾಗೂ ಸ್ಪರ್ಧಿಸಿದ ಅಭ್ಯರ್ಥಿಗಳು ಅಥವಾ ಅವರ ಚುನಾವಣೆ ಏಜೆಂಟರ್ ಸಮ್ಮುಖದಲ್ಲಿ ತೆರೆಯಲಾಗುವುದು ಎಂದು ಅವರು ತಿಳಿಸಿದ್ದಾರೆ.

14 ಟೇಬಲ್‍ಗಳಲ್ಲಿ ಮತ ಎಣಿಕೆ
ಜಿಲ್ಲೆಯ 8 ವಿಧಾನಸಭಾ ಮತಕ್ಷೇತ್ರಗಳ ಮತ ಎಣಿಕೆಗೆ ಸಂಬಂಧಿಸಿದಂತೆ ಪ್ರತಿ ವಿಧಾನಸಭಾ ಮತಕ್ಷೇತ್ರಕ್ಕೆ 14 ಟೇಬಲ್‍ಗಳಲ್ಲಿ ಇವಿಎಂ ಮತ ಎಣಿಕೆ ಹಾಗೂ 4 ಟೇಬಲ್‍ಗಳಲ್ಲಿ ಅಂಚೆ ಮತಪತ್ರದ ಎಣಿಕೆ ಮತ್ತು ಸೇವಾ ಮತದಾರರ ಅಂಚೆ ಮತಪತ್ರಗಳನ್ನು ಚುನಾವಣಾಧಿಕಾರಿಗಳ ಟೇಬಲ್‍ನಲ್ಲಿ ಎಣಿಕೆ ಕಾರ್ಯ ಮಾಡಲಾಗುವುದು.

ಮತ ಎಣಿಕೆ ಸುತ್ತುಗಳು
ಜಿಲ್ಲೆಯ 8 ವಿಧಾನಸಭಾ ಮತಕ್ಷೇತ್ರಗಳ ಪೈಕಿ ಮತಗಟ್ಟೆಗಳನುಸಾರವಾಗಿ ಬಸವನಬಾಗೇವಾಡಿ ಮತಕ್ಷೇತ್ರದ 17 ಸುತ್ತುಗಳು, ಮುದ್ದೇಬಿಹಾಳ, ದೇವರಹಿಪ್ಪರಗಿ ಹಾಗೂ ಬಬಲೇಶ್ವರ ಮತಕ್ಷೇತ್ರದ 18 ಸುತ್ತುಗಳು ಹಾಗೂ ಬಿಜಾಪುರ ನಗರ, ಇಂಡಿ ಮತ್ತು ಸಿಂದಗಿ ಮತಕ್ಷೇತ್ರದ 20 ಸುತ್ತುಗಳು ಹಾಗೂ ನಾಗಠಾಣ ಮತಕ್ಷೇತ್ರದ 22 ಸುತ್ತುಗಳಲ್ಲಿ ಮತ ಎಣಿಕೆ ಕಾರ್ಯ ಮಾಡಲಾಗುವುದು.
408 ಮತ ಎಣಿಕೆ ಸಿಬ್ಬಂದಿ: ಮತ ಎಣಿಕೆ ಕಾರ್ಯಕ್ಕಾಗಿ ಪ್ರತಿ ವಿಧಾನಸಭಾವಾರು 14 ಟೇಬಲ್‍ಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದ್ದು, ಪ್ರತಿ ವಿಧಾನಸಭೆಗೆ 17 ಎಣಿಕೆ ಮೇಲ್ವಿಚಾರಕರು, 17 ಎಣಿಕೆ ಸಹಾಯಕರು 17 ಮೈಕ್ರೋ ಆಬ್ಸರವರ್ ಒಳಗೊಂಡಂತೆ ಒಟ್ಟು 51 ಅಧಿಕಾರಿ-ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ಜಿಲ್ಲೆಯ 8 ವಿಧಾನಸಭಾ ಮತಕ್ಷೇತ್ರಗಳಿಗೆ 112 ಟೇಬಲ್, 136 ಎಣಿಕೆ ಮೇಲ್ವಿಚಾರಕರು, 136 ಎಣಿಕೆ ಸಹಾಯಕರು, 136 ಮೈಕ್ರೋ ಆಬ್ಸರವರ್ ಸೇರಿದಂತೆ ಒಟ್ಟು 408 ಅಧಿಕಾರಿ-ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.

224 ಅಂಚೆ ಮತ ಪತ್ರ ಎಣಿಕೆ ಸಿಬ್ಬಂದಿ
ಅದರಂತೆ ಅಂಚೆ ಮತಪತ್ರಗಳ ಎಣಿಕೆಯನ್ನು ಪ್ರತಿ ವಿಧಾನಸಭಾ ವಾರು 4 ಟೇಬಲ್‍ಗಳಲ್ಲಿ ಜಿಲ್ಲೆಯ 8 ವಿಧಾನಸಭೆಗಳಿಗೆ 32 ಟೇಬಲ್‍ಗಳ ವ್ಯವಸ್ಥೆ, ಹಾಗೂ ಪ್ರತಿ ವಿಧಾನಸಭೆವಾರು 5 ಎಣಿಕೆ ಮೇಲ್ವಿಚಾರಕರು, 10 ಎಣಿಕೆ ಸಹಾಯಕರು, 5 ಮೈಕ್ರೋ ಆಬ್ಸರ್‍ವರ್ ಹಾಗೂ 4 ಎಆರ್‍ಓ ಸೇರಿದಂತೆ ಒಟ್ಟು 28 ಜನ ಪ್ರತಿ ವಿಧಾನಸಭೆಗೆ ನಿಯೋಜಿಸಲಾಗಿದೆ. ಜಿಲ್ಲೆಯ 8 ವಿಧಾನಸಭೆ ಮತಕ್ಷೇತ್ರಗಳಿಗೆ ಅಂಚೆ ಮತ ಪತ್ರ ಎಣಿಕೆಗಾಗಿ 32 ಟೇಬಲ್‍ಗಳ ವ್ಯವಸ್ಥೆ, 40 ಎಣಿಕೆ ಮೇಲ್ವಿಚಾರಕರು, 80 ಎಣಿಕೆ ಸಹಾಯಕರು, 40 ಮೈಕ್ರೋ ಆಬ್ಸರವರ್, 32 ಎಆರ್‍ಓ ಸೇರಿದಂತೆ ಒಟ್ಟು 224 ಅಧಿಕಾರಿ-ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.
ಮತ ಎಣಿಕೆ ಕೇಂದ್ರದಲ್ಲಿ ಚುನಾವಣಾ ಆಯೋಗದಿಂದ ಅನುಮತಿ ಪಡೆದ ಅಧಿಕಾರಿಗಳು, ಎಣಿಕೆ ಮೇಲ್ವಿಚಾರಕರು, ಎಣಿಕೆ ಸಹಾಯಕರು, ಜಿಲ್ಲಾ ಚುನಾವಣಾಧಿಕಾರಿಗಳಿಂದ ಅಧಿಕೃತ ಪಾಸ್ ಪಡೆದ ಮಾಧ್ಯಮದವರು, ಮತ ಎಣಿಕೆ ಕಾರ್ಯಕ್ಕೆ ನಿಯೋಜಿಸಲಾದ ಅಧಿಕಾರಿ-ಸಿಬ್ಬಂದಿ, ಸ್ಪರ್ಧಿಸಿದ ಅಭ್ಯರ್ಥಿ ಹಾಗೂ ಅವರ ಚುನಾವಣಾ ಏಜೆಂಟರು ಮತ್ತು ಎಣಿಕೆ ಏಜೆಂಟರಿಗೆ ಮಾತ್ರ ಪ್ರವೇಶಾವಕಾಶವಿದೆ ಎಂದು ಅವರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು