News Kannada
Tuesday, October 03 2023
ಬೆಂಗಳೂರು

ಅಪಾರ್ಟ್‌ಮೆಂಟ್‌ ಮಾಲೀಕನನ್ನು ಹತ್ಯೆಗೈದ ಸೆಕ್ಯೂರಿಟಿ ಗಾರ್ಡ್‌

death 20072021
Photo Credit :

ಬೆಂಗಳೂರು : ಬೆಂಗಳೂರಿನ HAL ಪೊಲೀಸ್‌ ಠಾಣಾ ವ್ಯಾಪ್ತಿಯ ಅಪಾರ್ಟ್‌ಮೆಂಟ್‌ ಕಟ್ಟಡವೊಂದರಲ್ಲಿ ಬುಧವಾರ ಕರ್ತವ್ಯದ ವೇಳೆ ಮದ್ಯಪಾನ ಮಾಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಫ್ಲಾಟ್‌ ಮಾಲೀಕನ ಮೇಲೆ ಸೆಕ್ಯೂರಿಟಿ ಗಾರ್ಡ್‌ ಹಲ್ಲೆ ನಡೆಸಿ ಹತ್ಯೆಗೈದಿರುವ ಆಘಾತಕಾರಿ ಘಟನೆ ನಡೆದಿದೆ.ಮೃತರನ್ನು ಭಾಸ್ಕರ್ ರೆಡ್ಡಿ (65) ಎಂದು ಗುರುತಿಸಲಾಗಿದೆ.
ಆರೋಪಿ ಭದ್ರತಾ ಸಿಬ್ಬಂದಿ ನೇಪಾಳ ಮೂಲದ ಬಸಂತ್ ಆಗಿದ್ದು, ಆತನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ.

ಭಾಸ್ಕರ್ ರೆಡ್ಡಿ ಅವರು ಬಸಂತನು ಕುಡಿಯುತ್ತಿದ್ದುದನ್ನು ಕಂಡು ಅದನ್ನು ವಿರೋಧಿಸಿದರು, ಕರ್ತವ್ಯದ ಸಮಯದಲ್ಲಿ ಮದ್ಯಪಾನ ಮಾಡದಂತೆ ಎಚ್ಚರಿಕೆ ನೀಡಿದರು. ಸೆಕ್ಯುರಿಟಿ ಗಾರ್ಡ್ ತನ್ನ ಅಭ್ಯಾಸವನ್ನು ಬದಲಾಯಿಸದ ಕಾರಣ ಅವರು ಅಪಾರ್ಟ್‌ಮೆಂಟ್‌ಗಳ ಸಂಘಕ್ಕೂ ಈ ಬಗ್ಗೆ ದೂರು ನೀಡಿದ್ದರು. ಈ ಸಂಬಂಧ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.

ಕೋಪಗೊಂಡ ಬಸಂತ್ ಸೇಡು ತೀರಿಸಿಕೊಳ್ಳಲು ನಿರ್ಧರಿಸಿದನು.ಬೆಳಗ್ಗೆ ರೆಡ್ಡಿ ಪಾರ್ಕಿಂಗ್ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ಬಸಂತ್ ಅವರ ಮೇಲೆ ಹಲ್ಲೆ ನಡೆಸಿ ಚಾಕುವಿನಿಂದ ಕತ್ತು ಸೀಳಿದ್ದಾನೆ. ಅಕ್ಕಪಕ್ಕದವರು ಆತನನ್ನು ಆಸ್ಪತ್ರೆಗೆ ಸಾಗಿಸಲು ಯತ್ನಿಸಿದರಾದರೂ ರೆಡ್ಡಿ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

See also  ದಾವಣಗೆರೆ: ವೃದ್ಧ ದಂಪತಿಯ ದಾರುಣ ಹತ್ಯೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು