News Kannada
Monday, October 02 2023
ಬೆಂಗಳೂರು

ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿಯ ಐಶಾರಾಮಿ ಕಾರಿಗೆ ಬೆಂಕಿ

SATHISH REDDY 12082021
Photo Credit :

ಬೆಂಗಳೂರು: ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಅವರ ಮನೆಮುಂದೆ ನಿಲ್ಲಿಸಿದ್ದ ಎರಡು ಐಷಾರಾಮಿ ಕಾರುಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ಬುಧವಾರ ತಡರಾತ್ರಿ ನಡೆದಿದೆ.

ತಡರಾತ್ರಿ ಒಂದೂವರೆ ಗಂಟೆ ಸುಮಾರಿಗೆ ಘಟನೆ ನಡೆದಿದೆ. ಸತೀಶ್ ರೆಡ್ಡಿ ಅವರ ಫಾರ್ಚೂನರ್ ಕಾರು ಹಾಗೂ ಮಹೀಂದ್ರ ಥಾರ್ ಜೀಪ್ ಸುಟ್ಟು ಹೋಗಿದೆ. ಸಿಸಿಟಿವಿಯಲ್ಲಿ ಈ ದೃಶ್ಯ ದಾಖಲಾಗಿದ್ದು, ನಾಲ್ಕು ಮಂದಿ ದುಷ್ಕರ್ಮಿಗಳು ಪೆಟ್ರೋಲ್ ಕ್ಯಾನ್ ​ಗಳನ್ನ ತಂದು ಬೆಂಕಿ ಹಚ್ಚಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಘಟನೆಯ ಬಗ್ಗೆ ಶಾಸಕ ಸತೀಶ್ ರೆಡ್ಡಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ‘1:23ಕ್ಕೆ ದುಷ್ಕರ್ಮಿಗಳು ಬಂದಿದ್ದು, ಆ ಕಡೆ ಈ ಕಡೆ ನೋಡಿ ಎರಡು ಗಾಡಿಗಳಿಗೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚುತ್ತಾರೆ’, ಕೇವಲ ಮೂರ್ನಾಲ್ಕು ನಿಮಿಷದಲ್ಲಿ ಈ ದುಷ್ಕ್ರತ್ಯ ಎಸಗಿದ್ದಾರೆ. ಆ ದೃಶ್ಯಗಳು ಸಿಸಿ ಟಿವಿಯಲ್ಲಿ ಸೆರೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

1:30ಕ್ಕೆ ನಮಗೆ ಘಟನೆ ಬಗ್ಗೆ ಗೊತ್ತಾಗಿದೆ. ಬ್ಯಾಟರಿ ಸ್ಫೋಟಗೊಂಡಿದ್ದರಿಂದ ಶಬ್ದ ಬಂದು ನಮಗೆ ಎಚ್ಚರವಾಯಿತು. ಗೇಟ್ ಬಳಿ ಇದ್ದ ಪೊಲೀಸರು ಹಾಗೂ ನಮ್ಮ ವಾಚ್​ಮ್ಯಾನ್ ಓಡಿ ಬಂದರು. ಅರ್ಧಗಂಟೆ ಕಾಲ ಬೆಂಕಿಯನ್ನ ಆರಿಸುವ ಕೆಲಸವನ್ನು ಮಾಡಿದ್ದಾರೆ. ಆದರೂ ಕಾರುಗಳು ಸಂಪೂರ್ಣವಾಗಿ ಸುಟ್ಟು ಹೋಗಿವೆ ಎಂದು ಮಾಹಿತಿ ನೀಡಿದ್ದಾರೆ.

See also  ಕಾರಿನಲ್ಲಿ ಏಕಾಏಕಿ ಬೆಂಕಿ: ಉದ್ವಿಗ್ನ ವಾತಾವರಣ ನಿರ್ಮಾಣ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು