News Kannada
Sunday, December 10 2023
ಬೆಂಗಳೂರು

ರಾಮಚಂದ್ರಾಪುರ ಮಠ: ಎಸಿಎಫ್‌ ಆದೇಶ ರದ್ದು

New Project 19 3
Photo Credit :

ಬೆಂಗಳೂರು: 60 ಎಕರೆ ಭೂಮಿ ಮೀಸಲು ಅರಣ್ಯ ಎಂದು ಘೋಷಿಸಿ ಶಿವಮೊಗ್ಗ ಜಿಲ್ಲೆಯ ಹೊಸನಗರ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ(ಎಸಿಎಫ್) ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಈ ಆದೇಶ ಪ್ರಶ್ನಿಸಿದ್ದ ರಾಮಚಂದ್ರಾಪುರ ಮಠವು ಆ ಭೂಮಿ ಗೋಮಾಳ ಎಂದು ವಾದಿಸಿತ್ತು.

ಹೊಸನಗರ ತಾಲ್ಲೂಕಿನ ಸರ್ವೆ ನಂಬರ್ 7ರಲ್ಲಿ 25 ಎಕರೆ ಗೋಮಾಳ ಭೂಮಿಯನ್ನು ಮಂಜೂರು ಮಾಡಲು ಧರ್ಮ ಚಕ್ರ ಟ್ರಸ್ಟ್ ಹೆಸರಿನಲ್ಲಿ ಮಠ ಅರ್ಜಿ ಸಲ್ಲಿಸಿದೆ. ಈ ಜಾಗದಲ್ಲಿ ಹಲವು ಗೋಶಾಲೆಗಳನ್ನು ನಡೆಸುವ ಉದ್ದೇಶವನ್ನು ಮಠ ಹೊಂದಿದೆ.

ಈ ಮಧ್ಯೆ, ಅರಣ್ಯ ಜಾಗವನ್ನು ಒತ್ತುವರಿ ಮಾಡಲಾಗಿದೆ. ಅದು ಮೀಸಲು ಅರಣ್ಯ ಎಂದು 2015ರ ಜುಲೈ 15ರಂದು ಎಸಿಎಫ್‌ ಆದೇಶ ಹೊರಡಿಸಿದ್ದರು.

ಈ ಆದೇಶ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ಮಠ, ರಾಜ್ಯ ಸರ್ಕಾರ ಈ ಜಾಗವನ್ನು ಗೋಮಾಳ ಎಂದು ಪರಿಗಣಿಸಿದೆ. 160 ಎಕರೆ ಜಾಗ ಮೀಸಲು ಎಂದು ಘೋಷಿಸಿ 2005ರಲ್ಲಿ ಅಧಿಸೂಚನೆ ಹೊರಡಿಸಿರುವ ಸರ್ಕಾರ, ಉಳಿದ 60 ಎಕರೆಯನ್ನು ಗೋಮಾಳ ಎಂದೇ ಉಳಿಸಿದೆ ಎಂದು ಮಠದ ಪರ ವಕೀಲರು ವಾದಿಸಿದರು.

2012ರ ನವೆಂಬರ್ 21ರಂದು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿರುವ ಶಿವಮೊಗ್ಗ ಜಿಲ್ಲಾಧಿಕಾರಿ, ಅದು ಗೋಮಾಳ ಜಾಗ ಎಂದು ತಿಳಿಸಿದ್ದಾರೆ. ಅದಕ್ಕೂ ಮೊದಲೇ ಜಾಗ ಮಂಜೂರು ಮಾಡಲು ಕೋರಿ ಮಠ ಮನವಿ ಸಲ್ಲಿ ಸಿದೆ ಎಂದು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಪೀಠ ಗಮನಿಸಿತು.

ಎಸಿಎಫ್‌ ಆದೇಶ ಆಧರಿಸಿ ಕಂದಾಯ ಇಲಾಖೆ ದಾಖಲೆಗಳನ್ನು ಬದಲಾಯಿಸಿದ್ದರೆ ಅದನ್ನು ಗೋಮಾಳ ಎಂದು ಮಾರ್ಪಡಿಸಿ ಎರಡು ತಿಂಗಳಲ್ಲಿ ವರದಿ ಸಲ್ಲಿಸಬೇಕು. ಭೂ ಮಂಜೂರಾತಿ ಕೋರಿರುವ ಅರ್ಜಿದಾರರ ಮನವಿ ಗಳನ್ನು ಪರಿಗಣಿಸಿ ಆರು ತಿಂಗಳಲ್ಲಿ ನ್ಯಾಯಾಲಯಕ್ಕೆ ತಿಳಿಸಬೇಕು ಎಂದು ಪೀಠ ಸೂಚಿಸಿತು.

See also  12 ಹೈಕೋರ್ಟ್‌: 68 ನ್ಯಾಯಮೂರ್ತಿಗಳ ನೇಮಕಕ್ಕೆ ಶಿಫಾರಸು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು