News Karnataka Kannada
Friday, March 29 2024
Cricket
ಬೆಂಗಳೂರು

ಅಂತರ್ಜಾತಿ ವಿವಾಹ ಪ್ರೋತ್ಸಾಹಕ್ಕೆ ಸ್ನೇಹ ಸಮ್ಮೇಳನ

Photo Credit : News Kannada

ಬೆಂಗಳೂರು: ಸಮಾಜದಲ್ಲಿ ಮೇಲು , ಕೀಳು , ತಾರತಮ್ಯಗಳನ್ನು ನಿವಾರಣೆ ಮಾಡಿ , ಸಾಮರಸ್ಯ ಮೂಡಿಸುವ ಹಾಗೂ ಹಿಂದೂಗಳಲ್ಲಿ ಅಂತರ್ಜಾತಿ ವಿವಾಹಗಳನ್ನು ಪ್ರೋತ್ಸಾಹಿಸಲು ವ್ಯಾಪಕ ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಮನ್ನಿಕೇರಿಯ ವಿಶ್ವ ಹಿಂದೂ ಅಂತರ್ಜಾತಿ ವಿವಾಹ ಪ್ರೋತ್ಸಾಹಕ ಸಂಘದ ಸಂಸ್ಥಾಪಕ ಅಧ್ಯಕ್ಷರು ಮನ್ನಿಕೇರಿಯ ಮಹಾಂತಲಿಂಗೇಶ್ವರ ಮಠದ ಪೂಜ್ಯ ಶ್ರೀ ವಿಜಯ ಸಿದ್ಧೇಶ್ವರ ಸ್ವಾಮೀಜಿ ಹೇಳಿದ್ದಾರೆ.

 ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂತರ್ಜಾತಿ ವಿವಾಹ ಪ್ರೋತ್ಸಾಹಿಸಲು ರಾಜ್ಯದಾದ್ಯಂತ ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು .  ಅಂತರ್ಜಾತಿ  ವಿವಾಹವಾದ ದಂಪತಿಗಳನ್ನು ಗೌರವಿಸುವ ಅವರ ಸಂಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಸ್ನೇಹ ಸಮ್ಮೇಳನ ಹಾಗೂ ಇನ್ನಿತರ ವಿವಿಧ ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ವಿವಾಹವಾದ ದಂಪತಿಗಳಿಗೆ ಪ್ರೋತ್ಸಾಹ ನೀಡುವ ಜೊತೆಗೆ ಸರ್ಕಾರದ ಸೌಲಭ್ಯಗಳನ್ನು ದೊರಕಿಸಿ ಕೊಡಲಾಗುವುದು. ಒಟ್ಟಾರೆ ಜಾತಿ ವ್ಯವಸ್ಥೆ ನಿರ್ಮೂಲನೆಗೊಳಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.

ಎಲ್ಲ ಜನರಿಗೂ ಧಾರ್ಮಿಕ ಹಾಗೂ ಸಾಮಾಜಿಕ ಸಮಾನತೆಯ ಅವಕಾಶಗಳನ್ನು ದೊರಕಿಸುವ , ಸಮಾನತೆ ಸಾರುವ ವಿಚಾರ ಧಾರೆಗಳನ್ನು ಉತ್ತೇಜಿಸುವಂತಹ ಉದಾತ್ತ ಧೈಯ ಹೊಂದಿದ್ದು ಈ ಮೂಲಕ ಹಿಂದೂ ಧರ್ಮದಿಂದ ಅನ್ಯ ಧರ್ಮಗಳಿಗೆ ಮತಾಂತರವಾಗುವುದನ್ನು ತಪ್ಪಿಸುವುದು ನಮ್ಮ ಪರಮ ಗುರಿಯಾಗಿದೆ. ಈಗಾಗಲೇ ಮತಾಂತರಗೊಂಡವರನ್ನು ಮನವೊಲಿಸಿ ಮತ್ತೆ ಹಿಂದೂ ಧರ್ಮಕ್ಕೆ ಮರಳಿ ಕರೆತರುವ ಉದ್ದೇಶ ಹೊಂದಲಾಗಿದೆ ಎಂದು ಹೇಳಿದರು.

ಲಕ್ಷಾಂತರ ಜನ ಅಂತರ್ಜಾತಿ ವಿವಾಹವಾಗಿದ್ದು ಅವರೆಲ್ಲರನ್ನು ಒಂದೇ ವೇದಿಕೆಗೆ ತರುವ ಜೊತೆಗೆ ಅಂತರ್ಜಾತಿ ವಿವಾಹವಾದ ಹಿಂದೂಗಳು ಹಾಗೂ ಹಿಂದೂ ಧರ್ಮಕ್ಕೆ ಸೇರ್ಪಡೆಗೊಂಡ ಆರ್ಥಿಕವಾಗಿ ಹಿಂದೂಳಿದ ಬಡಕುಂಟುಂಬಗಳಿಗೆ ನೆರವು , ಶೈಕ್ಷಣಿಕ , ಸಾಮಾಜಿಕ ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾದ ಗಮನಕ್ಕೆ ತರುವುದು , ಎಂದು ವಿಜಯ  ಸಿದ್ಧೇಶ್ವರ ಸ್ವಾಮೀಜಿ ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು