ಈ ಚುನಾವಣೆ ಬಗ್ಗೆ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಇಡೀ ಭಾರತದ ಗಮನ ಸೆಳೆದಿರುವ ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಭಾರೀ ಅಂತರದ ಗೆಲವು ಸಾಧಿಸುವುದು ಖಚಿತ ಎಂದು ಭವಿಷ್ಯ ನುಡಿದಿದ್ದಾರೆ.
ಈ ಬಗ್ಗೆ ಫೇಸ್ಬುಕ್ನಲ್ಲಿ ಬರೆದುಕೊಂಡಿರುವ ಕುಮಾರಸ್ವಾಮಿ, ಬಿಜೆಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಇದ್ದಿದ್ದರೆ ಚೆನ್ನಾಗಿರುತ್ತಿತ್ತು ಎಂದು ಸ್ವತಃ ಆ ಪಕ್ಷದ ನಾಯಕ ರಾಜೀವ್ ಬ್ಯಾನರ್ಜಿ ಹೇಳಿರುವುದರಲ್ಲಿ ಅಚ್ಚರಿಯೇನು ಇಲ್ಲ. ಇದು ಅಪ್ಪಟ ಸತ್ಯ. ಮಮತಾ ಬ್ಯಾನರ್ಜಿ ಅವರು ಕೇವಲ ನಾಯಕಿಯಲ್ಲ, ಸಮಸ್ತ ಬಂಗಾಳಿಗರ ನಾಡಿಮಿಡಿತ. ಈ ಸತ್ಯವನ್ನು ಅರಿಯುವಲ್ಲಿ ಬಿಜೆಪಿ ಸೋತಿದೆ ಎಂದಿದ್ದಾರೆ.