News Karnataka Kannada
Friday, April 26 2024
ಬೆಂಗಳೂರು

ಕನ್ನಡ ನಿರ್ಲಕ್ಷ್ಯ ಮಾಡಿದ ಮೆಟ್ರೋ ವ್ಯವಸ್ಥಾಪಕ ನಿರ್ದೇಶಕರಿಗೆ ನೋಟಿಸ್

Bangalore Metro 5 7 21
Photo Credit :

ಬೆಂಗಳೂರು : ನಾಯಂಡಹಳ್ಳಿಯಿಂದ ಕೆಂಗೇರಿವರೆಗಿನ ನಮ್ಮ ಮೆಟ್ರೋ ವಿಸ್ತರಣಾ ಕಾರ್ಯಕ್ರಮದಲ್ಲಿ ಕನ್ನಡ ನಿರ್ಲಕ್ಷ್ಯ ಮಾಡಿದ ಹಿನ್ನೆಲೆಯಲ್ಲಿ ವ್ಯವಸ್ಥಾಪಕ ನಿರ್ದೇಶಕರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೋಟೀಸ್ ಜಾರಿ ಮಾಡಿದೆ.

ಸರ್ಕಾರಿ ಕಾರ್ಯಕ್ರಮಗಳಲ್ಲಿ ಕಡ್ಡಾಯ ಕನ್ನಡ ಬಳಕೆ ಮಾಡಬೇಕು ಎಂಬ ಆದೇಶವಿದ್ದರೂ ಮೆಟ್ರೋ ರೈಲು ವಿಸ್ತರಣೆಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಕನ್ನಡವನ್ನು ಬಳಕೆ ಮಾಡದೆ ಅಪಮಾನ ಮಾಡಿದ್ದು, ಇದಕ್ಕೆ ಕಾರಣವೇನು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್‍ಕುಮಾರ್ ಪ್ರಶ್ನಿಸಿದ್ದಾರೆ.

ಬ್ಯಾನರ್ ಗಳಲ್ಲಿ ಕನ್ನಡ ಭಾಷೆ ಬಳಸಬೇಕೆಂದು ಸರ್ಕಾರ ಸೂಚನೆ ನೀಡಿದೆ. ಆದರೂ ಕಾರ್ಯಕ್ರಮದ ಸಂದರ್ಭ ಕನ್ನಡ ಭಾಷೆಯನ್ನು ನಿರ್ಲಕ್ಷಿಸುವ ಮೂಲಕ ಕನ್ನಡಿಗರ ಭಾವನೆಗಳಿಗೆ ಅಪಮಾನ ಮಾಡಲಾಗಿದೆ. ಇದಕ್ಕೆ ಕಾರಣವೇನು ಎಂಬುವುದನ್ನು ನೋಟೀಸ್‍ನಲ್ಲಿ ತಿಳಿಸಬೇಕೆಂದು ಸೂಚಿಸಿದ್ದಾರೆ. ಮುಂದೆ ಈ ರೀತಿ ಪ್ರಮಾದ ಎಸಗುವವರ ಮೇಲೆ ಕಠಿಣ ಕ್ರಮ ಜರಗಿಸುವುದಾಗಿ ಎಚ್ಚರಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು